ವಿಜಯಪುರ: ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮವ್ಯಾಪ್ತಿಯ ಹೊಲವೊಂದರಲ್ಲಿ ಓರ್ವ ಪುರುಷ ಹಾಗೂ ಓರ್ವ ಮಹಿಳೆ ಒಂದೇ ಸ್ಥಳದಲ್ಲಿ ವಿಷ ಸೇವಿಸಿದ್ದು, ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತಪಟ್ಟ ಮಹಿಳೆಯನ್ನು ಮುದ್ದೇಬಿಹಾಳ ತಾಲೂಕು ಗಂಗೂರ ಗ್ರಾಮದ ರೇಣುಕಾ ಝಳಕಿ (36 ವ) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಸೋಂಕಿನಿಂದ ಸತ್ತವರ ಸಂಖ್ಯೆಯ ಬಗ್ಗೆ ಸರ್ಕಾರ ಸುಳ್ಳು ಮಾಹಿತಿ ನೀಡುತ್ತಿದೆ: ಸಿದ್ದರಾಮಯ್ಯ
ಗಂಭೀರ ಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ವ್ಯಕ್ತಿಯನ್ನು ಮುದ್ದೇಬಿಹಾಳ ತಾಲೂಕು ಹಡಲಗೇರಿ ಗ್ರಾಮದ ಬಸವರಾಜ ಕಿಲಾರಹಟ್ಟಿ (46 ವ) ಎನ್ನಲಾಗಿದೆ. ಬಸವರಾಜ ವಿವಾಹಿತನಾಗಿದ್ದು, ಆರು ಮಕ್ಕಳಿವೆ. ಈತನನ್ನು ಮುದ್ದೇಬಿಹಾಳ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಗ್ರಾಮಗಳ ಮಹಿಳೆ-ಪುರುಷ ವಿಷ ಸೇವಿಸಿದ್ದಾರೆ. ಘಟನಾ ಸ್ಥಳದಲ್ಲಿ ವಿಷದ ಬಾಟಲಿ ಸಿಕ್ಕಿದೆ.
ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುದ್ದೇಬಿಹಾಳ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು, ಕಾನೂನು ಕ್ರಮ ಕೈಕೊಂಡಿದ್ದಾರೆ.