Advertisement

Renukaswamy case: ಪೊಲೀಸರ ಮುಂದೆ ಶರಣಾದ ಮತ್ತಿಬ್ಬರು ಆರೋಪಿಗಳು

04:39 PM Jun 14, 2024 | Team Udayavani |

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 14 ಮಂದಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಟ ದರ್ಶನ್ ಬಂಧನದ ಕಾರಣದಿಂದ ದೇಶದಲ್ಲೆಡೆ ಸುದ್ದಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಶುಕ್ರವಾರ ಪೊಲೀಸರಿಗೆ ಶರಣಾಗಿದ್ದಾರೆ.

Advertisement

ಆರೋಪಿಗಳಾದ ಜಗ್ಗು ಹಾಗೂ ಅನುಕುಮಾರ್ ಪೊಲೀಸರ ಮುಂದೆ ಶರಣಾಗಿದ್ದಾರೆ. ಚಿತ್ರದುರ್ಗ ಡಿವೈಎಸ್ ಪಿ ಕಚೇರಿಗೆ ಬಂದು ಡಿವೈಎಸ್ ಪಿ ದಿನಕರ್ ಮುಂದೆ ಹಾಜರಾಗಿದ್ದಾರೆ.

ಶರಣಾದ ಆರೋಪಿಗಳಾದ ಜಗ್ಗು ಮತ್ತು ಅನುಕುಮಾರ್ ಇಬ್ಬರು ಆಟೋ ಡ್ರೈವರ್ ಗಳಾಗಿದ್ದಾರೆ ಎಂದು ವರದಿ ಹೇಳಿದೆ.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಒಟ್ಟು 16 ಮಂದಿ ಆರೋಪಿಗಳು ಹತ್ಯೆ ಪ್ರಕರಣದಲ್ಲಿ ಬಂಧಿಯಾಗಿದ್ದಾರೆ.

ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆತಂದು ಖಾಸಗಿ ಶೆಡ್ ನಲ್ಲಿ ಕೂಡಿ ಹಾಕಿ ಹಿಂಸಿಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರಂಭದಲ್ಲಿ ಮೂವರು ಶರಣಾಗಿದ್ದರು. ಬಳಿಕ ಪೊಲೀಸರು ಮೈಸೂರಿನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿದ್ದರು. ಇದೀಗ ಒಟ್ಟು ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next