Advertisement

ಡೆಂಗ್ಯೂಗೆ ಬಾಣಸಿಗ ಸೇರಿ ಇಬ್ಬರು ಬಲಿ

06:40 AM Aug 07, 2017 | Team Udayavani |

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂಗೆ ಇಬ್ಬರು ಬಲಿಯಾಗಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ತೋಕಸಂದ್ರದಲ್ಲಿ ದೀಪಕ್‌ (18) ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಕನಕಪುರದಲ್ಲಿ ಐಟಿಐ ಎರಡನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ದೀಪಕ್‌, ಕಳೆದ 5 ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ. ಭಾನುವಾರ ಬೆಳಗ್ಗೆ ಕನಕಪುರಕ್ಕೆ ವೈದ್ಯರ ಬಳಿ ತೋರಿಸಿಕೊಳ್ಳಲು ಬರುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

Advertisement

ಮೈಸೂರಿನ ಕೆಎಸ್‌ಆರ್‌ಪಿ ಘಟಕದಲ್ಲಿ ಮುಖ್ಯ ಬಾಣಸಿಗರಾಗಿದ್ದ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಕುರುಬರ ಬಡಾವಣೆಯ ನಿವಾಸಿ, ಸಿದ್ದರಾಜು(57) ಎಂಬುವರು ಡೆಂಗ್ಯೂಗೆ ಬಲಿಯಾಗಿದ್ದಾರೆ. ಕಳೆದೊಂದು ವಾರದಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಸರ್ಕಾರಿ ಗೌರವದೊಂದಿಗೆ ಕುರುಬ ಜನಾಂಗದ ಸ್ಮಶಾನದಲ್ಲಿ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಮೃತರು ಮೈಸೂರಿನ ಕೆಎಸ್‌
ಆರ್‌ಪಿ ಘಟಕ, ನಕ್ಸಲೆಟ್‌ ನಿಗ್ರಹ ಪಡೆ ಮತ್ತು ಕಾಡುಗಳ್ಳ ವೀರಪ್ಪನ್‌ ಕಾರ್ಯಾಚರಣೆ ಹಾಗೂ ತಮಿಳುನಾಡು, ಕೇರಳ
ರಾಜ್ಯಗಳಲ್ಲಿ ಕರ್ನಾಟಕ ಪೊಲೀಸರ ಜಂಟಿ ಕಾರ್ಯಾಚರಣೆ ವೇಳೆ ಬಾಣಸಿಗರಾಗಿ ಸೇವೆ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next