Advertisement

ವಿಟ್ಲ: ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ; ಎರಡು ನ್ಯಾಯಬೆಲೆ ಅಂಗಡಿ ಅಮಾನತು

01:09 AM Jun 24, 2022 | Team Udayavani |

ವಿಟ್ಲ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿ ಬಿದ್ದ ಲಾರಿ ಚಾಲಕನನ್ನು ವಿಚಾರಣೆ ನಡೆಸಿದಾಗ ಆರೋಪಿ ನ್ಯಾಯಬೆಲೆ ಅಂಗಡಿಯವರ ಬಗ್ಗೆ ಮಾಹಿತಿ ನೀಡಿದ್ದು, ಈ ಬಗ್ಗೆ ವಿಟ್ಲ ಠಾಣೆಯಲ್ಲಿ ದಾಖಲಾದ ಪ್ರಕರಣದ ಆಧಾರದಲ್ಲಿ ಬಂಟ್ವಾಳ ತಾಲೂಕು ಬೊಳಂತೂರು ಗ್ರಾಮದ ಅಬೂಬಕ್ಕರ್‌ ಮತ್ತು ಹಮೀದ್‌ ನಾರ್ಶ್‌ ಅವರ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದಿಂದ ಅಮಾನತು ಮಾಡಲಾಗಿದೆ.

Advertisement

ಬೋಳಂತೂರು ಸಮೀಪದ ನಾರ್ಶದಿಂದ ಲಾರಿಯಲ್ಲಿ ಸುಮಾರು 15 ಟನ್‌ ಅಕ್ಕಿಯನ್ನು ಲಾರಿಯಲ್ಲಿ ಸಾಗಾಟ ಮಾಡಲಾಗುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸರ ತಂಡ ಆರೋಪಿ ಮತ್ತು 313 ಗೋಣಿಗಳ 15 ಟನ್‌ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿತ್ತು.

ಈ ವೇಳೆ ವಿಚಾರಣೆ ನಡೆಸಿದಾಗ ಲಾರಿ ಚಾಲಕ ನೀಡಿದ ಮಾಹಿತಿ ಮೇರೆಗೆ ನ್ಯಾಯಬೆಲೆ ಅಂಗಡಿ ಮಾಲೀಕ ಹಮೀದ್‌ ಮತ್ತು ಅಬೂಬಕ್ಕರ್‌ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರ ನ್ಯಾಯಬೆಲೆ ಅಂಗಡಿ ಪ್ರಾಧಿಕಾರದಿಂದ ಅಮಾನತು ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next