Advertisement

ಹೆತ್ತವರ ಮಡಿಲು ಸೇರಿದ ಸಹೋದರಿಯರು

10:31 AM May 10, 2020 | Suhan S |

ಧಾರವಾಡ: ಲಾಕ್‌ಡೌನ್‌ ಜಾರಿಯಿಂದಾಗಿ ದೂರದ ರಾಜಸ್ಥಾನದಲ್ಲಿದ್ದ ತಮ್ಮ ಪಾಲಕರನ್ನು ಸೇರಲಾಗದೇ ಆತಂಕಕ್ಕೀಡಾಗಿದ್ದ ರೋಮುಕುಮಾರಿ ಮತ್ತು ಪೋಸುಕುಮಾರಿ ಎಂಬ ಇಬ್ಬರು ಮಕ್ಕಳು ಶುಕ್ರವಾರ ರಾತ್ರಿ ರಾಜಸ್ಥಾನದ ಸಿರೋಹಿ ಜಿಲ್ಲೆಯ ಮೆಮಂಡ್ವಾರ ಗ್ರಾಮದಲ್ಲಿರುವ ತಮ್ಮ ಹೆತ್ತ ತಂದೆ-ತಾಯಿಗಳ ಮಡಿಲು ಸೇರಿದ್ದಾರೆ.

Advertisement

ಕಳೆದ ಐವತ್ತು ದಿನಗಳಿಂದ ಹೆತ್ತವರಿಂದ ಅಗಲಿದ್ದ ಈ ಮಕ್ಕಳನ್ನು ಅವರ ಪಾಲಕರೊಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್‌, ಹುಬ್ಬಳ್ಳಿ ಶಹರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ ಸೇರಿದಂತೆ ಹಲವರು ವಿಶೇಷ ಪ್ರಯತ್ನ ಮಾಡಿದ್ದರು. ಮೇ 7ರಂದು ಜಿಲ್ಲಾಧಿಕಾರಿಗಳು ಶುಭ ಹಾರೈಸಿ ಮಕ್ಕಳನ್ನು ಬೀಳ್ಕೊಟ್ಟಿದ್ದರು. ರಮೇಶ್‌ ರಾವಲ್‌ ಅವರು ತಮ್ಮ ಸ್ವಂತ ಕಾರನ್ನು ಸ್ವತಃ ಚಾಲನೆ ಮಾಡಿಕೊಂಡು ದೂರದ ರಾಜಸ್ಥಾನವರೆಗೆ ಹೋಗಿ ಮಕ್ಕಳನ್ನು ಅವರು ಪಾಲಕರಿಗೆ ತಲುಪಿಸಿದ್ದಾರೆ. ಮಕ್ಕಳು ತಲುಪಿರುವ ಕುರಿತು ರಾಜಸ್ಥಾನದ ಸಿರೋಹಿ ಜಿಲ್ಲಾಧಿಕಾರಿ ಭಗವತಿ ಪ್ರಸಾದ ಅವರು ಧಾರವಾಡ ಜಿಲ್ಲಾಧಿಕಾರಿಗೆ ಲಿಖೀತ ಪತ್ರ ಬರೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next