Advertisement

ನಿಜಾಮುದ್ದೀನ್ ಸಭೆಯಲ್ಲಿ ಯೋಧರು! ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಡ್ಯ ಎಸ್ಪಿ

09:06 AM Apr 03, 2020 | keerthan |

ಮಂಡ್ಯ :  ದಿಲ್ಲಿ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಇಬ್ಬರು ಯೋಧರು ಭಾಗವಹಿಸಿದ್ಧಾರೆ ಎಂದು ಮಂಡ್ಯ ಎಸ್ಪಿ ಕೆ.ಪರಶುರಾಮ್ ಮಾಹಿತಿ ನಿಡಿದ್ಧಾರೆ.

Advertisement

ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದಿದ್ದ ಧಾರ್ಮಿಕ ಸಮಾರಂಭದಲ್ಲಿ ದೇಶ ವಿದೇಶಗಳ ಸಾವಿರಾರು ಜನರು ಭಾಗವಹಿಸಿದ್ದರು. ಇದರಲ್ಲಿ ಪಾಲ್ಗೊಂಡಿದ್ದ ಹಲವರಿಗೆ ಕೋವಿಡ್-19 ಸೋಂಕು ದೃಡಪಟ್ಟಿದ್ದು, ಕೆಲವರು ಇದೇ ಕಾರಣದಿಂದ ಸಾವನ್ನಪ್ಪಿದ್ದಾರೆ.

ಇದರಿಂದಾಗಿ ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲರ ಮೇಲೂ ನಿಗಾ ಇಡಲು ಸರಕಾರ  ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯಿಂದ ಭಾಗವಹಿಸಿದ ಎಂಟು ಜನರ ಪಟ್ಟಿ ನೀಡಲಾಗಿದ್ದು, ಅದರಲ್ಲಿ ಇಬ್ಬರು ಯೋಧರ ಹೆಸರು ಕಂಡುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಗಡಿ ರಕ್ಷಣಾ ಪಡೆಯಲ್ಲಿರುವ ಇಬ್ಬರು ಯೋಧರು ಸಭೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next