Advertisement

ರಾಜ್ಯದ ಇಬ್ಬರು ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ಗರಿ

11:14 PM Aug 28, 2019 | Team Udayavani |

ಬೆಂಗಳೂರು: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಪ್ರತಿ ವರ್ಷ ಸೆ.5ಕ್ಕೆ ನೀಡುವ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರು ಆಯ್ಕೆಯಾಗಿದ್ದಾರೆ. 2018ನೇ ಸಾಲಿನ ರಾಷ್ಟ್ರಪ್ರಶಸ್ತಿ ಪುರಷ್ಕೃತರ ಪಟ್ಟಿಯನ್ನು ಎಂಎಚ್‌ಆರ್‌ಡಿ ಪ್ರಕಟಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಎಲೆಕ್ಯಾತನಹಳ್ಳಿ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಬಿ.ಎಸ್‌.ಶಶಿಕುಮಾರ್‌ ಹಾಗೂ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಬೆಸೂರು ಸರ್ಕಾರಿ ಪ್ರೌಢಶಾಲೆಯ ಸುರೇಶ್‌ ಮರಕಾಲ ಅವರಿಗೆ ಲಭಿಸಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next