Advertisement

ಕೆರೆಯಲ್ಲಿ ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

04:16 PM Nov 10, 2020 | sudhir |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನಲ್ಲಿ ಈಜಾಡಲು ಹೋಗಿ 4 ಬಾಲಕರು ಮೃತಪಟ್ಟಿರುವ ಘಟನೆ ಇನ್ನು ಹಸಿರಾಗಿ ಇರುವಾಗಲೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನಲ್ಲಿ ಕುರಿ ಮೇಯಿಸಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಈಜಾಡಲು ಹೋಗಿ ಮೃತಪಟ್ಟಿರುವ ಘಟನೆ ಸಂಭವಿಸಿದೆ.

Advertisement

ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿಯ ದರ್ಶನ್ ಬಿನ್ ಮೂರ್ತಿ (15), ಕಾಚಹಳ್ಳಿ ಗ್ರಾಮದ ಶಿವರಾಜ್ ಬಿನ್ ಮಂಜುನಾಥ್ (14) ಮೃತಪಟ್ಟ ದುರ್ದೈವಿಗಳು.

ಶಿಡ್ಲಘಟ್ಟ ತಾಲೂಕಿನ ಕಾಚಹಳ್ಳಿ ಗ್ರಾಮದ ಶಿವರಾಜ್, ತಮ್ಮ ಚಿಕ್ಕಮ್ಮನ ಮನೆಗೆ ಬಂದಿದ್ದು ಈ ವೇಳೆಯಲ್ಲಿ ಚಿಕ್ಕಮ್ಮನ ಮಗ ದರ್ಶನ್ ಜೊತೆಗೆ ಕುರಿಗಳನ್ನು ಮೇಯಿಸಲು ಬಚ್ಚನಹಳ್ಳಿ ಬಳಿ ಇರುವ ಅರಣ್ಯ ಪ್ರದೇಶಕ್ಕೆ ತೆರಳಿದ್ದಾರೆ ಆದರೆ ಕುರಿಗಳನ್ನು ಮೇಯಿಸುತ್ತಾ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಹಿಂಬಾಗದಲ್ಲಿರುವ ಯರ್ರಕುಂಟೆಯಲ್ಲಿ ಈಜಾಡಲು ಹೋಗಿ ಇಬ್ಬರು ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ.

ಇದನ್ನೂ ಓದಿ:ಶಿರಾದಲ್ಲಿ ‘ವಿಜಯ’: ಕಲ್ಪತರು ನಾಡಿನಲ್ಲಿ ಕಮಲ ಅರಳಿಸಿದ ಡಾ.ರಾಜೇಶ್ ಗೌಡ

ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಗ್ರಾಮ ಪಂಚಾಯತಿ ಪಿಡಿಓ ಗೌಸಪೀರ್,ದಿಬ್ಬೂರಹಳ್ಳಿ ಪೋಲೀಸ್ ಠಾಣೆಯ ಪಿಎಸ್‍ಐ ನಾರಾಯಣಪ್ಪ ಮತ್ತು ಸಿಬ್ಬಂದಿ ಭೇಟಿ ನೀಡಿ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ಯಲು ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ.

Advertisement

ಇಬ್ಬರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವುದರಿಂದ ಅವರ ಪೋಷಕರು ಮತ್ತು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ದಿಬ್ಬೂರಹಳ್ಳಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ತನಿಖೆ ಮುಂದುವರೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next