Advertisement

ಹಂದ್ವಾರ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಉಗ್ರರ ಹತ್ಯೆ:

03:55 AM Mar 01, 2019 | |

ಶ್ರೀನಗರ: ಶುಕ್ರವಾರ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಈ ಚಕಮಕಿಯಲ್ಲಿ ಓರ್ವ ನಾಗರಿಕ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

Advertisement

ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರದಲ್ಲಿ ಇಂದು ಬೆಳಗ್ಗೆ ಉಗ್ರಗಾಮಿಗಳು ಅಡಗಿಕೊಂಡಿರುವ ಮಾಹಿತಿ ತಿಳಿದ ಭಾರತೀಯ ಸೇನೆ ಅವರನ್ನು ಸುತ್ತುವರಿದು ದಾಳಿ ಮಾಡಿದೆ. ಈ ವೇಳೆಗೆ ಲಷ್ಕರ್ ಸಂಘಟನೆಗೆ ಸೇರಿದ ಇಬ್ಬರು ಉಗ್ರಗಾಮಿಗಳನ್ನು ಸೇನೆ ಕೊಂದು ಹಾಕಿವೆ. 

ದಾಳಿ ವೇಳೆಗೆ ಓರ್ವ ನಾಗರಿಕರು ಗಾಯಗೊಂಡಿದ್ದು, ಹತ ಉಗ್ರಗಾಮಿಗಳ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next