Advertisement

ಎರಡು-ಮೂರು ದಿನ ಮಳೆ ಸಾಧ್ಯತೆ

11:28 PM Aug 15, 2019 | Team Udayavani |

ಬೆಂಗಳೂರು: ಸ್ವಾತಂತ್ರ್ಯ ದಿನದ ಸಂಭ್ರಮಾಚರಣೆಗೆ ಕೊಂಚ ವಿರಾಮ ನೀಡಿದ ವರುಣ, ಮುಂದಿನ ಎರಡು ದಿನಗಳು ಅಬ್ಬರಿಸುವ ಸಾಧ್ಯತೆ ಇದೆ.

Advertisement

ತಮಿಳುನಾಡಿನ ದಕ್ಷಿಣ ಭಾಗದಲ್ಲಿ ಚಂಡಮಾರುತದ ಪರಿಚಲನೆ ಹಾಗೂ ಕರ್ನಾಟಕ ಕರಾವಳಿ ಮತ್ತು ಕೇರಳ ಕರಾವಳಿ ನಡುವೆ ಕಡಿಮೆ ಒತ್ತಡದ ತಗ್ಗು (ಆಫ್ಶೋರ್‌ ಟ್ರಫ್) ಉಂಟಾಗಿದ್ದರಿಂದ ಮುಂದಿನ ಮೂರು ದಿನ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿಯ ಪ್ರಭಾರ ನಿರ್ದೇಶಕ ಸಿ.ಎಸ್‌. ಪಾಟೀಲ ತಿಳಿಸಿದ್ದಾರೆ.

ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಹಳದಿ ಬಣ್ಣದ ಎಚ್ಚರಿಕೆ ನೀಡಲಾಗಿದೆ. ಸಾಮಾನ್ಯವಾಗಿ ದಿನಕ್ಕೆ 70ರಿಂದ 120 ಮಿ.ಮೀ. ಮಳೆಯಾಗುವ ಪ್ರದೇಶದಲ್ಲಿ ಈ ಸೂಚನೆ ನೀಡಲಾಗುತ್ತದೆ. ಆಯ್ದ ಭಾಗಗಳಲ್ಲಿ ಮಾತ್ರ ಭಾರಿ ಹಾಗೂ ಉಳಿದ ಕಡೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಗುರುವಾರ ಬಹುತೇಕ ಕಡೆಗಳಲ್ಲಿ ಮಳೆ ತಗ್ಗಿದೆ ಎಂದು ಅವರು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next