Advertisement

ಜೀಗುಪ್ಸೆಗೊಂಡು ಇಬ್ಬರು ಆತ್ಮಹತ್ಯೆ

12:12 PM Jul 09, 2018 | |

ಬೆಂಗಳೂರು: ಕಾಡುಗೊಂಡನಹಳ್ಳಿ ಹಾಗೂ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಟೈಲರ್‌ ಹಾಗೂ ಪೇಂಟರ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಜೀವನದಲ್ಲಿ ಜೀಗುಪ್ಸೆಗೊಂಡು ಬಿಹಾರ ಮೂಲದ ಟೈಲರ್‌ ವೇದಪ್ರಕಾಶ್‌ ಎಂಬಾತ ನೇಣಿಗೆ ಶರಣಾದ ಘಟನೆ ಬೊಮ್ಮನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ ವೇದಪ್ರಕಾಶ್‌ ಸ್ನೇಹಿತರ ಜತೆ ಬೊಮ್ಮನಹಳ್ಳಿಯ ಕೋಡಿಚಿಕ್ಕನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.

ಗಾರ್ಮೆಂಟ್ಸ್‌ವೊಂದರಲ್ಲಿ ಟೈಲರಿಂಗ್‌ ಕೆಲಸ ಮಾಡುತ್ತಿದ್ದು, ಕೆಲ ದಿನಗಳ ಹಿಂದೆ ಸ್ವಂತ ಊರಿಗೆ ಹೋಗಿ ಬಂದಾಗಿನಿಂದಲೂ ಬೇಸರದಿಂದ ಇದ್ದರು. ಶನಿವಾರ ಸಂಜೆ ಸ್ನೇಹಿತರು ಹೊರ ಹೋದಾಗ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.  

ಮತ್ತೂಂದು ಪ್ರಕರಣದಲ್ಲಿ ಕಾಡುಗೊಂಡನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಪೇಂಟರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಬಾಗಲೂರು ಲೇಔಟ್‌ ನಿವಾಸಿ ಭಾಸ್ಕರ್‌ (32) ಆತ್ಮಹತ್ಯೆ ಮಾಡಿಕೊಂಡವರು.

8 ವರ್ಷಗಳ ಹಿಂದೆ ಭಾಸ್ಕರ್‌ಗೆ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಪತ್ನಿ ತವರು ಮನೆಗೆ ಹೋಗಿದ್ದರು. ಶನಿವಾರ ಸಂಜೆ ಕೆಲಸದಿಂದ ಮನೆಗೆ ಬಂದ ಭಾಸ್ಕರ್‌, ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾರೆ. ರಾತ್ರಿ 9 ಗಂಟೆಗೆ ತಾಯಿ ಊಟಕ್ಕೆ ಕರೆಯಲು ಕೊಠಡಿಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next