Advertisement

Road Mishap; ದ್ವಿಚಕ್ರ ವಾಹನ ರಸ್ತೆಗೆ ಬಿದ್ದು ಸಹಸವಾರ ಸಾವು

12:08 AM Mar 12, 2024 | Team Udayavani |

ಪುಂಜಾಲಕಟ್ಟೆ: ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ಸಹಸವಾರ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವದಲ್ಲಿ ಮಾ. 10ರಂದು ಸಂಭವಿಸಿದೆ.

Advertisement

ಕಾವಳಪಡೂರು ಗ್ರಾಮದ ಮಧ್ವ ಬರ್ಕಟ್ಟ ನಿವಾಸಿ ತಿಮ್ಮಪ್ಪ ಗೌಡ ಅವರ ಪುತ್ರ ಗುಣಕರ (44) ಮೃತಪಟ್ಟವರು. ಮೃತರು ಪತ್ನಿ, ಎಳೆಯ ಪ್ರಾಯದ ಪುತ್ರ ಹಾಗೂ ಪುತ್ರಿಯನ್ನು ಆಗಲಿದ್ದಾರೆ.

ಅವರು ಕಲ್ಲಡ್ಕದ ಹೊಟೇಲೊಂದರಲ್ಲಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದು, ವಗ್ಗದಿಂದ ಮಧ್ವ ಕಡೆಗೆ ಸಹೋದರ ಭರತೇಶನ ಜತೆ ಸಾಗುತ್ತಿದ್ದಾಗ ಸವಾರನ ನಿಯಂತ್ರಣ ತಪ್ಪಿ ಬೈಕ್‌ ಸಮೇತ ರಸ್ತೆಗೆ ಬಿದ್ದಿದ್ದರು. ಗುಣಕರ ಅವರು ತೀವ್ರ ಗಾಯಗೊಂಡಿದ್ದು, ತತ್‌ಕ್ಷಣ ಸ್ಥಳೀಯರಾದ ಆನಂದ ಮತ್ತಿತರರು ಅವರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಿದ್ದರು. ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕಟರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next