Advertisement

Male Mahadeshwara ಬೆಟ್ಟಕ್ಕೆ ಅ.15ರ ವರೆಗೆ ದ್ವಿಚಕ್ರ ವಾಹನಗಳ ನಿರ್ಬಂಧ

09:50 PM Oct 11, 2023 | Team Udayavani |

ಚಾಮರಾಜನಗರ: ಮಹಾಲಯ ಅಮಾವಾಸ್ಯೆ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ ಅಕ್ಟೋಬರ್ 11ರ ಸಂಜೆ 6 ಗಂಟೆಯಿಂದ ಅ15 ಸಂಜೆ 7 ಗಂಟೆಯವರೆಗೆ ದ್ವಿಚಕ್ರ ವಾಹನಗಳಲ್ಲಿ ತೆರಳವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.

Advertisement

ಮಲೈ ಮಹದೇಶ್ವರ ಬೆಟ್ಟದಲ್ಲಿ ಅ 11 ರಿಂದ 15ರವರೆಗೆ ಜರುಗಲಿರುವ ಮಹಾಲಯ ಅಮಾವಾಸ್ಯೆ ಜಾತ್ರಾ ಸಂಬಂಧ ಜಿಲ್ಲೆ, ಹೊರಜಿಲ್ಲೆಗಳಿಂದ ಹಾಗೂ ಹೊರ ರಾಜ್ಯಗಳಿಂದ ಸುಮಾರು 1.5 ರಿಂದ 2 ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಸೇರುವ ಸಂಭವವಿದ್ದು, ವಾಹನ ದಟ್ಟಣೆ ಹೆಚ್ಚಾಗುವುದರಿಂದ, ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದು,  ವಾಹನಗಳ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next