Advertisement

ಹುಣಸೂರು: ಜಾನುವಾರುಗಳಿಗೆ ನೀರು ಕುಡಿಸಲು ಹೋಗಿದ್ದ ಯುವಕರಿಬ್ಬರು ನೀರುಪಾಲು

09:26 PM Jun 17, 2022 | Team Udayavani |

ಹುಣಸೂರು: ಜಾನುವಾರುಗಳಿಗೆ ನೀರು ಕುಡಿಸಲು ಹೋದ ಇಬ್ಬರು ಸ್ನೇಹಿತರು ನೀರುಪಾಲದ ಘಟನೆ ತಾಲೂಕಿನ ಹನಗೋಡಿಗೆ ಸಮೀಪದ ಹೆಗ್ಗಂದೂರಿನಲ್ಲಿ ಶುಕ್ರವಾರ ಸಂಜೆ ನಡೆದಿದೆ.

Advertisement

ಹೆಗ್ಗಂದೂರಿನ ರಮೇಶ್‌ರಾವ್‌ರ ಏಕೈಕ ಪುತ್ರ ಶರತ್‌ರಾವ್ (17) ಹಾಗೂ ಪುಟ್ಟೇಗೌಡರ ಪುತ್ರ ಶಿವಕುಮಾರ್(17) ಮೃತರು. ಈರ್ವರು ಹನಗೋಡಿನ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವೀತಿಯ ಪಿ.ಯು ಪರೀಕ್ಷೆ ಬರೆದಿರುವ ಸ್ನೇಹಿತರು.

ಕಾಮಗೌಡನಹಳ್ಳಿ ಬಳಿಯ ಲಕ್ಷ್ಮಣತೀರ್ಥ ನದಿಯಲ್ಲಿ ತಮ್ಮ ಜಾನುವಾರುಗಳಿಗೆ ನೀರು ಕುಡಿಸಲು ಹೋಗಿ ಆಯತಪ್ಪಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿದ್ದರು. ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರಿಂದ ನದಿಯಲ್ಲಿ ಶೋಧ ನಡೆಸಿದ್ದು, ಶಿವಕುಮಾರ್ ಶವ ಪತ್ತೆಯಾಗಿದ್ದು, ಶರತ್‌ರಾವ್ ಶವ ಇನ್ನೂ ಸಿಕ್ಕಿಲ್ಲ ರಾತ್ರಿಯಾಗಿದ್ದರಿಂದ ಶನಿವಾರ ಬೆಳಿಗ್ಗೆ ಶೋಧ ಕಾರ್ಯಾಚರಣೆಯನ್ನು ನಡೆಸಲಾಗುವುದೆಂದು ಪೊಲೀಸರು ತಿಳಿಸಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next