Advertisement

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

04:43 PM Oct 22, 2024 | Team Udayavani |

ಯಾದಗಿರಿ: ಜಿಲ್ಲೆಯ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ವಿದ್ಯುತ್ ಉತ್ಪಾದನೆ ಘಟಕದ ನೀರಿನಲ್ಲಿ ಈಜಲು ತೆರಳಿ ಇಬ್ಬರು ಯುವಕರು ಮುಳುಗಿ ಮೃತಪಟ್ಟ ಘಟನೆ ಮಂಗಳವಾರ (ಅ.22) ನಡೆದಿದೆ.

Advertisement

ಕೃಷ್ಣಾ ನದಿಗೆ ಸ್ನಾನ ಮಾಡಲು ತೆರಳಿದ್ದ ಯುವಕರಿಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರಾ ಸಮೀಪ ನಡೆದಿದೆ.

ಗ್ರಾಮದ ಬೆಂಚಿ ಗಡ್ಡಿಯ ಹತ್ತಿರವಿರುವ ಪಿಪಿಸಿಎಲ್ ವಿದ್ಯುತ್ ಪೂರೈಕೆ ಘಟಕದಲ್ಲಿ ಕೆಲಸಕ್ಕಿದ್ದ ನಾಗಾಲ್ಯಾಂಡ್ ಮೂಲದ 23 ವರ್ಷ ವಯಸ್ಸಿನ ಅಲಾಮ ಹಾಗೂ ಬಿಜಾಪುರ ಜಿಲ್ಲೆಯ ಮುತ್ತಗಿ ಗ್ರಾಮದ 24 ವರ್ಷದ ಮಾರುತಿ ತಂದೆ ಶಿವಪ್ಪ ಸೂರ್ಯವಂಶಿ ಎನ್ನುವ ಇಬ್ಬರು ಯುವಕರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತ ದೇಹಗಳನ್ನು ಹೊರಗೆ ತೆಗೆದಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು, ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next