Advertisement

ಯು.ಟಿ.ಖಾದರ್ ಕಾರು ಬೆನ್ನಟ್ಟಿದ ಪ್ರಕರಣ: ಓರ್ವ ಶಂಕಿತ ಪೊಲೀಸ್ ವಶಕ್ಕೆ

12:40 PM Dec 24, 2020 | keerthan |

ಮಂಗಳೂರು: ಶಾಸಕ ಯು.ಟಿ.ಖಾದರ್ ಅವರಿದ್ದ ಕಾರನ್ನು ದುಷ್ಕರ್ಮಿಗಳು ಬೆನ್ನಟ್ಟಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಓರ್ವ ಶಂಕಿತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Advertisement

ಅನೀಶ್ ಪೂಜಾರಿ (28) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈತ ದೇರಳಕಟ್ಟೆಯಲ್ಲಿ ಕೆಲಸ ಮುಗಿಸಿ ಉರ್ವದ ಕಡೆಗೆ ತನ್ನ ಮನೆಗೆ ಬೈಕ್ ನಲ್ಲಿ ಬರುತ್ತಿದ್ದ. ಆದರೆ ಈತ ಸಚಿವರನ್ನು ಹಿಂಬಾಲಿಸಿಲ್ಲ. ಅವನಷ್ಟಕ್ಕೆ ಬರುತ್ತಿದ್ದ. ಬೇರೆ ಉದ್ದೇಶ ಇದ್ದಂತಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಯು.ಟಿ. ಖಾದರ್‌ ಅವರು ಬುಧವಾರ ರಾತ್ರಿ 7.45ರ ಸುಮಾರಿಗೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ವಿಮಾನ ನಿಲ್ದಾಣದತ್ತ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ದೇರಳಕಟ್ಟೆ ಬಳಿ ಬೈಕೊಂದು ಎರಡು ಬಾರಿ ಅವರ ಕಾರಿನ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಹಾದು ಹೋಗಿತ್ತು. ಈ ಬಗ್ಗೆ ಸಂಶಯಗೊಂಡ ಶಾಸಕರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಇದನ್ನೂ ಓದಿ:ಶಾಸಕ ಯು.ಟಿ.ಖಾದರ್ ಸಂಚರಿಸುತ್ತಿದ್ದ ಕಾರನ್ನು ಬೈಕಿನಲ್ಲಿ ಹಿಂಬಾಲಿಸಿದ ಅಪರಿಚಿತರು

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆ ಬೈಕ್‌ನವರನ್ನು ವಶಕ್ಕೆ ಪಡೆಯಲು ಮುಂದಾದರು. ಆದರೆ ನಂತೂರು ಬಳಿ ಬರುವಷ್ಟರಲ್ಲಿ ಅವರು ಪರಾರಿಯಾಗಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next