Advertisement

ಜನರಿಗೆ ಕಿಟ್ ಕೊಟ್ರೆ ವೈರಸ್ ಹೋಗೋದಿಲ್ಲ,ಮಂಗಳೂರಿನಲ್ಲಿ ಜನರ ಜೀವಕ್ಕೆ ಬೆಲೆ ಇಲ್ವಾ: ಖಾದರ್

04:50 PM May 16, 2020 | keerthan |

ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ದಕ್ಷಿಣ ಕ‌ನ್ನಡ ಜಿಲ್ಲೆಯಲ್ಲಿ ಐದು ಸಾವಾಗಿದೆ. ಜಿಲ್ಲಾಡಳಿತ, ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು.  ಪಾಸಿಟಿವ್ ಆದ ಮೂರು ದಿನದಲ್ಲಿ ಸಾಯುತ್ತಾರೆ. ಹಾಗಾದರೆ ಮಂಗಳೂರಿನಲ್ಲಿ ಜನರ ಜೀವಕ್ಕೆ ಬೆಲೆ ಇಲ್ವಾ ಎಂದು ಮಾಜಿ ಸಚಿವ ಯು ಟಿ ಖಾದರ್ ಪ್ರಶ್ನಿಸಿದ್ದಾರೆ.

Advertisement

ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಇದನ್ನು ತಮಾಷೆಯಾಗಿ ತೆಗೆದುಕೊಳ್ಳಬಾರದು. ಜನರು ಸಾವುಗೀಡಾಗಿರೋದಕ್ಕೆ ಕಾರಣ ಏನು ಎನ್ನುವುದನ್ನು ಆರೋಗ್ಯ ಇಲಾಖೆ ತನಿಖೆ ಮಾಡಲಿ. ಒಬ್ಬ ಸೋಂಕಿತ ಸತ್ತರೆ 150 ಜನರಿಗೆ ಸೋಂಕು ತಗಲುತ್ತದೆ. ಇದು ವೈದ್ಯಕೀಯ ಅಧ್ಯಯನ ದಿಂದ ಧೃಡಪಟ್ಟಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಸೋಂಕು ಮೂಲವನ್ನೇ ಪತ್ತೆ ಹಚ್ಚಲು ಆಗಿಲ್ಲ. ಯಾವುದೇ ವಿಚಾರದಲ್ಲೂ ಜಿಲ್ಲಾಡಳಿತದಲ್ಲಿ ಸ್ಪಷ್ಟತೆ ಇಲ್ಲ. ಜನರಿಗೆ ಕೇವಲ ಕಿಟ್ ಕೊಟ್ಟರೆ ವೈರಸ್ ಹೋಗೋದಿಲ್ಲ, ವೈರಸ್ ನಿಯಂತ್ರಣ ಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಇನ್ನೂ ಕೇಂದ್ರ ಸರ್ಕಾರದ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ವಿಚಾರವಾಗಿ ಮಾತನಾಡಿದ ಖಾದರ್, ಎಲ್ಲಾ ದೇಶಗಳಂತೆ ಭಾರತದಲ್ಲೂ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ರೈತನಿಗೆ ಸಾಲ ಜಾಸ್ತಿಯೇ ಹೊರತು ಬಡ್ಡಿ ಮನ್ನ ಮಾಡಲಿಲ್ಲ. ಅವತ್ತು ಪ್ರತಿಯೋರ್ವರ ಅಕೌಂಟ್ ಗೆ 15 ಲಕ್ಷ ಹಾಕೋದಾಗಿ ಹೇಳಿದ್ದಿರಿ, ಈವಾಗ ಪ್ರತಿಯೋರ್ವರ ಅಕೌಂಟ್ ಗೆ 15 ಸಾವಿರ ರೂಪಾಯಿ ಹಾಕಿ, ಎರಡೂ ಮಾತು ಉಳಿಸಿಕೊಂಡ ರೀತಿ ಆಗುತ್ತದೆ. ರಾಜ್ಯ ಸರ್ಕಾರ ಹೊಸ ಯೋಜನೆ ಘೋಷಣೆ ಮಾಡಿಲ್ಲ. ಮೀನುಗಾರಿಕೆ ಮತ್ತು ನೇಕಾರರಿಗೆ ಹಳೆಯ ಯೋಜನೆಯನ್ನೇ ಮತ್ತೊಮ್ಮೆ ಪ್ರಕಟಿಸಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next