Advertisement

“ಅಗ್ನಿಪಥ’ಉದ್ಯೋಗ, ಶಿಕ್ಷಣದಿಂದ ವಂಚಿತರನ್ನಾಗಿಸುವ ಯೋಜನೆ: ಖಾದರ್‌

12:30 AM Jun 20, 2022 | Team Udayavani |

ಮಂಗಳೂರು: “ಅಗ್ನಿಪಥ’ ಯುವಜನರ ದಾರಿ ತಪ್ಪಿಸಿ ಅವರನ್ನು ಉದ್ಯೋಗ ಮತ್ತು ಶಿಕ್ಷಣದಿಂದ ವಂಚಿತರನ್ನಾಗಿಸುವ ಯೋಜನೆಯಾಗಿದೆ ಎಂದು ವಿಧಾನಸಭೆಯ ವಿಪಕ್ಷ ಉಪನಾಯಕ ಯು.ಟಿ. ಖಾದರ್‌ ಟೀಕಿಸಿದ್ದಾರೆ.

Advertisement

ಸರಕಾರ ಸೈನ್ಯಕ್ಕೆ ನೇರ ನೇಮಕಾತಿಯನ್ನು ರದ್ದುಪಡಿಸಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಮುಂದಾಗಿದೆ. ಈ ಮೂಲಕ ಸೇನೆಯ ನೇಮಕಾತಿಯನ್ನು ಕೂಡ ಖಾಸಗಿಯವರ ಕೈಗೆ ನೀಡಲು ಹೊರಟಿದೆ. ಕೂಡಲೇ ಈ ಯೋಜನೆ ಯನ್ನು ವಾಪಸ್‌ ಪಡೆಯಬೇಕು ಎಂದು ರವಿವಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಮಾತನಾಡಿ ಯೋಜನೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್‌ನಿಂದ ಮುಂದಿನ ವಾರ ಸತ್ಯಾಗ್ರಹ ನಡೆಸಲಾಗುವುದು ಎಂದರು. ಮುಖಂಡರಾದ ಸಂತೋಷ್‌ ಕುಮಾರ್‌ ಶೆಟ್ಟಿ, ಟಿ.ಕೆ. ಸುಧೀರ್‌, ಅಪ್ಪಿ, ಜೇಮ್ಸ್‌ ಪ್ರವೀಣ್‌, ಫ‌ಯಾಜ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next