Advertisement

ನಾನು ಆಪ್‌ ಬೆಂಬಲಿಗ ಅಲ್ಲ; ಕಟ್ಟಾ ಬಿಜೆಪಿಗ: ಅಟೋ ಚಾಲಕ ವಿಕ್ರಂ

07:21 PM Sep 30, 2022 | Team Udayavani |

ಅಹಮದಾಬಾದ್‌: ಆಮ್‌ ಆದ್ಮಿ ಪಕ್ಷದ ಸಂಚಾಲಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಮತ್ತು ಇತರ ಮುಖಂಡರಿಗೆ ಭೋಜನ ಕೂಟ ಏರ್ಪಡಿಸಿದ್ದ ಗುಜರಾತ್‌ನ ಅಟೋ ಚಾಲಕ ವಿಕ್ರಂ ದಂತಾನಿ ಈಗ ತಾವು ಬಿಜೆಪಿಯ ಬೆಂಬಲಿಗ ಎಂದು ಹೇಳಿಕೊಂಡಿದ್ದಾರೆ.

Advertisement

“ನನಗೆ ಮತ ಹಾಕಲು ಅವಕಾಶ ಸಿಕ್ಕಿದ ಮೊದಲ ದಿನದಿಂದಲೂ ಬಿಜೆಪಿಯ ಬೆಂಬಲಿಗನೇ ಆಗಿದ್ದೇನೆ’ ಎಂದು ಅವರು ಹೇಳಿಕೊಂಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಆಟೋ ರಿಕ್ಷಾ ಒಕ್ಕೂಟದ ಸೂಚನೆಯ ಮೇರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಮನೆಗೆ ಭೋಜನಕ್ಕೆ ಆಹ್ವಾನಿಸಿದ್ದೆ ಎಂದು ಹೇಳಿದ್ದಾರೆ.

ಆಮ್‌ ಆದ್ಮಿ ಪಕ್ಷ ಮತ್ತು ಅದರ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರ ಜತೆಗೆ ಯಾವುದೇ ಬಾಂಧವ್ಯ ಇಲ್ಲ ಎಂದು ವಿಕ್ರಂ ದಂತಾನಿ ಸ್ಪಷ್ಟಪಡಿಸಿದ್ದಾರೆ.

ಸೆ.12ರಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಮತ್ತು ಇತರರು ವಿಕ್ರಂ ಅವರ ಮನೆಯಲ್ಲಿ ಭೋಜನ ಸವಿದಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next