Advertisement

Uchila ಮಹಾಲಕ್ಷ್ಮೀ ದೇಗುಲ; ಅ. 12: ಮಹಾಚಂಡಿಕಾಯಾಗ

01:33 PM Oct 11, 2024 | Team Udayavani |

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ದಲ್ಲಿ ವಿಜಯ ದಶಮಿ ಪ್ರಯುಕ್ತ ಅ. 12 ರಂದು ಮಹಾಚಂಡಿಕಾ ಯಾಗ ಮತ್ತು ಅನ್ನಸಂತರ್ಪಣೆ ನಡೆಯಲಿದೆ.

Advertisement

ಬೆಳಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11.30ಕ್ಕೆ ಮಹಾಪೂಜೆ, ಮಧ್ಯಾಹ್ನ 12ಕ್ಕೆ ಮಹಾಚಂಡಿಕಾಯಾಗ, ಪೂರ್ಣಾಹುತಿ, ಮಹಾ ಅನ್ನಸಂತರ್ಪಣೆ, ಭಜನೆ, ಮಧ್ಯಾಹ್ನ 2 ಗಂಟೆಗೆ ವಿಸರ್ಜನಾ ಪೂಜೆ, 3 ಗಂಟೆಗೆ ಶೋಭಾಯಾತ್ರೆ, ರಾತ್ರಿ 8.30ಕ್ಕೆ ಶ್ರೀ ಮಹಾಲಕ್ಷಿ$¾à ಕಲೊ³àಕ್ತ ಪೂಜೆ, ಬಳಿಕ ಪ್ರಸಾದ ವಿತರಣೆ ನಡೆಯಲಿದೆ.

ಅ. 11ರ ಮಹಾನವಮಿಯಂದು ಬೆಳಗ್ಗೆ 9 ಗಂಟೆಗೆ ಚಂಡಿಕಾ ಹೋಮ, ನವದುರ್ಗೆಯರಿಗೆ ಮಹಾಮಂಗಳಾರತಿ, ಭಜನೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ 5ರಿಂದ ಧಾರ್ಮಿಕ ಸಭೆ ನಡೆಯಲಿದೆ. ಸಂಜೆ 5.45ರಿಂದ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, 6.30ರಿಂದ ಮಂಗಳೂರಿನ ಕಲಾಮೃತ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮ, 7.30ರಿಂದ ನವದುರ್ಗೆಯರಿಗೆ ರಾತ್ರಿ ಮಹಾಪೂಜೆ, ವಿಶೇಷ ಗಂಗಾರತಿ ಪೂಜೆ, ವಾಗೀಶ್ವರೀ ಕಲ್ಪೋಕ್ತ ಪೂಜೆ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ 8ರಿಂದ ಅಜಯ್‌ ವಾರಿಯರ್‌ ಮತ್ತು ತಂಡ ಬೆಂಗಳೂರು ಇವರಿಂದ ಸಂಗೀತ ರಸಸಂಜೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next