Advertisement

Udane: ಡಾಮರು ಸಾಗಾಟದ ಲಾರಿಯಲ್ಲಿ ಆಕಸ್ಮಿಕ ಬೆಂಕಿ

12:11 AM Feb 15, 2024 | Team Udayavani |

ಉಪ್ಪಿನಂಗಡಿ: ದಿಢೀರ್‌ ಬೆಂಕಿ ಕಾಣಿಸಿಕೊಂಡ ಕಾರಣ ಡಾಮರು ಸಾಗಿಸುತ್ತಿದ್ದ ಲಾರಿ ಭಾಗಶಃ ಸುಟ್ಟು ಹೋದ ಘಟನೆ ಫೆ.13ರ ಮಧ್ಯರಾತ್ರಿ ರಾಷ್ಟ್ರೀಯ ಹೆದ್ದಾರಿ 75ರ ಉದನೆ ಸಮೀಪ ನಡೆದಿದೆ.

Advertisement

ಮಂಗಳೂರಿನಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಲಾರಿಯು ಉದನೆ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಅಪಾಯದ ಅರಿವಾಗುತ್ತಿದಂತೆ ಚಾಲಕ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು ಪಾರಾಗಿದ್ದಾರೆ. ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಯ ಕಾರ್ಮಿಕರು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ. ಬೆಂಕಿಗೆ ಶಾರ್ಟ್‌ ಸರ್ಕ್ನೂಟ್‌ ಕಾರಣ ಎಂದು ಹೇಳಲಾಗಿದೆ.

ಪೆರಿಯಡ್ಕ: ನೆಡುತೋಪಿಗೆ ಬೆಂಕಿ
ಉಪ್ಪಿನಂಗಡಿ: ಇಲ್ಲಿನ ಪೆರಿಯಡ್ಕ ಸಮೀಪದ ಸರ್ವೋದಯ ಪ್ರೌಢಶಾಲೆಗೆ ಹೋಗುವ ದಾರಿ ಬಳಿಯ ಅರಣ್ಯ ಇಲಾಖೆಯ ನೆಡುತೋಪಿ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿ ಕೊಂಡಿದ್ದು, ಅಗ್ನಿಶಾಮಕ ದಳದವರು ಆಗಮಿಸಿ ಬೆಂಕಿ ನಂದಿಸಿದರು.

ಫೆ.14ರಂದು ಸಂಜೆ ಸುಮಾರು 6.30ರ ಸುಮಾರಿಗೆ ಅಕೇಶಿಯಾ ನೆಡುತೋಪು ಇರುವ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿತು.

Advertisement

Udayavani is now on Telegram. Click here to join our channel and stay updated with the latest news.

Next