Advertisement

ಉದಯವಾಣಿ ಬಂಟ್ವಾಳ ಕಚೇರಿ ಶುಭಾರಂಭ

10:15 AM Jun 30, 2019 | mahesh |

ಬಂಟ್ವಾಳ: ಐದು ದಶಕಗಳಿಂದ ಜನರ ಆಶೋತ್ತರಗಳಿಗೆ ಸ್ಪಂದನೆ ನೀಡುತ್ತಾ ಬೆಳೆದು ಬಂದಿರುವ ಜನಮನದ ಜೀವನಾಡಿ ಉದಯವಾಣಿ ದಿನಪತ್ರಿಕೆಯು ಬಿ.ಸಿ. ರೋಡಿನ ಮಿನಿ ವಿಧಾನಸೌಧದ ಮುಂಭಾಗದ ಸಂಕೀರ್ಣದಲ್ಲಿ ಪ್ರಾರಂಭಿಸಿದ ನೂತನ ಕಚೇರಿಯು ಶುಕ್ರವಾರ ಶುಭಾರಂಭಗೊಂಡಿತು.

Advertisement

ಧಾರ್ಮಿಕ ವಿಧಿ ವಿಧಾನದ ಬಳಿಕ ದೀಪ ಬೆಳಗಿಸಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ, ಮಣಿಪಾಲ್ ಮೀಡಿಯ ನೆಟ್ವರ್ಕ್‌ ಲಿಮಿಟೆಡ್‌ನ‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವಿನೋದ್‌ಕುಮಾರ್‌, ಉದಯವಾಣಿ ಸಂಪಾದಕ ಅರವಿಂದ ನಾವಡ, ಮಾರುಕಟ್ಟೆ ವಿಭಾಗದ ಮುಖ್ಯಸ್ಥ ರಾಮಚಂದ್ರ ಮಿಜಾರ್‌, ಮಾಜಿ ಶಾಸಕ ಎ. ರುಕ್ಮಯ ಪೂಜಾರಿ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಟಾಸ್‌ ಆಲಿ, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ರವೀಂದ್ರ ಕಂಬಳಿ, ರೋಟರಿ ಜಿಲ್ಲಾ ಗವರ್ನರ್‌ ರೋಹಿನಾಥ್‌ ಪಾದೆ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್‌.ಸತೀಶ್ಚಂದ್ರ, ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್‌ ಎಲ್. ರೋಡ್ರಿಗಸ್‌, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ. ಭಂಡಾರಿ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಬಿ. ದೇವದಾಸ್‌ ಶೆಟ್ಟಿ, ಪ್ರಮುಖರಾದ ಸುದರ್ಶನ್‌ ಜೈನ್‌, ಜಯಶಂಕರ ಬಾಸ್ರಿತ್ತಾಯ, ದೀಪಕ್‌ಕುಮಾರ್‌ ಜೈನ್‌, ಸುಭಾಶ್ಚಂದ್ರ ಜೈನ್‌ ಮತ್ತಿತರರು ಶುಭ ಹಾರೈಸಿದರು.

ಬಂಟ್ವಾಳ ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿ ಆಗಮಿಸಿ ಹಸ್ತಾಕ್ಷರ ನೀಡಿ ಶುಭ ಹಾರೈಸಿದರು. ಆಗಮಿಸಿದ ಎಲ್ಲ ಗಣ್ಯರು ಹಸ್ತಾಕ್ಷರದ ಮೂಲಕ ಶುಭಕೋರಿದರು. ತಾಲೂಕಿನ ಗಣ್ಯರು, ಜಾಹೀರಾತುದಾರರು, ಪತ್ರಿಕಾ ಏಜೆಂಟ್‌ಗಳು, ಓದುಗರು, ವಿವಿಧ ಇಲಾಖೆಗಳ ಅಧಿಕಾರಿಗಳು ನೂತನ ಕಚೇರಿಗೆ ಆಗಮಿಸಿ ಶುಭ ಹಾರೈಸಿದರು.

Advertisement

Udayavani is now on Telegram. Click here to join our channel and stay updated with the latest news.

Next