Advertisement
ಉಡುಪಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯತ್ ಸಿಇಒ ಸಿಂಧೂ ಬಿ. ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಮಾ. 8ರಂದು ಮಣಿಪಾಲದ “ಉದಯವಾಣಿ’ ಪ್ರಧಾನ ಕಚೇರಿಗೆ ಆಗಮಿಸಿ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು.
ಈ ಬಾರಿಯ ಮಹಿಳಾ ದಿನಾಚರಣೆ ವಿಶೇಷವೆಂದರೆ ಜಿಲ್ಲೆಯ ನಾಲ್ಕು ಪ್ರಮುಖ ಹುದ್ದೆಗಳ ಸಾರಥ್ಯವನ್ನು ವಹಿಸಿ ಜಿಲ್ಲೆಯನ್ನು ಮುನ್ನಡೆಸುತ್ತಿರುವವರು ಮಹಿಳೆಯರೇ. ಇವರೆಲ್ಲರಿಗೂ ಕಟ್ಟುನಿಟ್ಟಿನ ಅಧಿಕಾರಿಗಳೆಂಬ ಹೆಗ್ಗಳಿಕೆಯೂ ಇದೆ. ಇದಕ್ಕೆ ಪೂರಕವಾಗಿ ಉಸ್ತುವಾರಿ ಸಚಿವೆ ಜಯಮಾಲಾ ಹಾಗೂ ಸಂಸದೆ ಶೋಭಾ ಕರಂದ್ಲಾಜೆಯವರೂ ಇದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಮುನ್ನೋಟ ಹೊಂದಿರುವ ಈ ಅಧಿಕಾರಿಗಳಿಂದ ಸಾರ್ವಜನಿಕರೂ ಬಹಳ ನಿರೀಕ್ಷೆಯಲ್ಲಿದ್ದಾರೆ.
Related Articles
Advertisement