Advertisement

ಉದ್ಯಾವರ: ಬಸ್‌ನಿಲ್ದಾಣದಲ್ಲಿ ಕುಸಿದು ಬಿದ್ದು ಬ್ಯಾಂಕ್‌ ಸಿಬಂದಿ ಸಾವು

11:27 PM Jun 30, 2022 | Team Udayavani |

ಕಾಪು: ಉದ್ಯಾವರ ಬಸ್‌ ನಿಲ್ದಾಣದಲ್ಲಿ ಕಟ್ಟಿಂಗೇರಿ ಯೂನಿಯನ್‌ ಬ್ಯಾಂಕ್‌ನ ಮಹಿಳಾ ಸಿಬಂದಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಉದ್ಯಾವರ ಗುಡ್ಡೆಯಂಗಡಿ ನಿವಾಸಿ ವಸಂತಿ (55) ಮೃತ ಮಹಿಳೆ.

Advertisement

ಕಂಟ್ಟಿಂಗೇರಿ ಯೂನಿಯನ್‌ ಬ್ಯಾಂಕ್‌ನಲ್ಲಿ ಉದ್ಯೋಗ ಮಾಡಿಕೊಂಡಿರುವ ವಸಂತಿ ಅವರು ಗುರುವಾರ ಬೆಳಗ್ಗೆ 8.30ಕ್ಕೆ ಬ್ಯಾಂಕ್‌ಗೆ ಹೋಗಲು ಉದ್ಯಾವರದ ಗುಡ್ಡೆಯಂಗಡಿ ಬಸ್‌ ನಿಲ್ದಾಣದಲ್ಲಿ ಬಸ್‌ಗೆ ಕಾಯುತ್ತಿದ್ದಾಗ ಕುಸಿದು ಬಿದ್ದಿದ್ದರು. ಸ್ಥಳೀಯರು ಅವರನ್ನು ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದರು.

ವಸಂತಿ ಅವರಿಗೆ ಮಧುಮೇಹ ಕಾಯಿಲೆ ಇದ್ದು ಒಂದೂವರೆ ವರ್ಷದ ಮೊದಲು ಎದೆ ಬಡಿತದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಬಗ್ಗೆ ಉಡುಪಿ ಮಿತ್ರಪ್ರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಅವರು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂಧು ಮೃತರ ಪುತ್ರ ಹೇಮಂತ್‌ ಕುಮಾರ್‌ ಕಾಪು ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next