Advertisement

ಶಿವಾಜಿ ಹೆಸರಿನಲ್ಲಿ ಮಹಾರಾಷ್ಟ್ರ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದ್ಧವ್ ಠಾಕ್ರೆ

03:58 PM Dec 02, 2019 | Nagendra Trasi |

ಮುಂಬೈ: ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಮಹಾರಾಷ್ಟ್ರ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಉದ್ಧವ್ ಠಾಕ್ರೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಗುರುವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

Advertisement

ಕಿಕ್ಕಿರಿದು ತುಂಬಿದ ಜನಸ್ತೋಮದ ಮುಂದೆ ಶಿವಾಜಿ ಪಾರ್ಕ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉದ್ದವ್ ಠಾಕ್ರೆ ಶಿವಾಜಿ ಮತ್ತು ದೇವರ ಹೆಸರಿನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಹಾರಾಷ್ಟ್ರದ ನೂತನ ಸಚಿವರಾಗಿ ಕಾಂಗ್ರೆಸ್ ಪಕ್ಷದ ಬಾಳಾ ಸಾಹೇಬ್ ಥೋರಟ್, ನಿತಿನ್ ರಾವತ್, ಎನ್ ಸಿಪಿಯ ಜಯಂತ್ ಪಾಟೀಲ್, ಛಗನ್ ಭುಜ್ ಬಲ್, ಶಿವಸೇನಾದ ಸುಭಾಶ್ ರಾಜಾರಾಮ್ ದೇಸಾಯಿ, ಏಕನಾಥ್ ಶಿಂಧೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲ ಕೋಶ್ಯಾರಿ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next