Advertisement

ಐದು ವರ್ಷ ಉದ್ಭವ್ ಠಾಕ್ರೆಯೇ ಮುಖ್ಯಮಂತ್ರಿ : ಸಂಜಯ್ ರಾವತ್

04:07 PM Dec 02, 2019 | Hari Prasad |

ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ನಾಲ್ಕು ದಿನಗಳ ಹಿಂದೆಯಷ್ಟೇ ಅಧಿಕಾರಕ್ಕೇರಿದ್ದ ದೇವೇಂದ್ರ ಫಡ್ನವೀಸ್ ಅವರು ಇಂದು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದರೊಂದಿಗೆ ರಾಜ್ಯದಲ್ಲಿ ಶಿವಸೇನೆ. ಎನ್.ಸಿ.ಪಿ., ಕಾಂಗ್ರೆಸ್ ಮೈತ್ರಿ ಪಕ್ಷಗಳ ಸರಕಾರ ರಚನೆಗೆ ಹಾದಿ ಸುಗಮವಾದಂತಾಗಿದೆ.

Advertisement

ಇದೇ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಶಿವಸೇನಾ ಸಂಸದ ಸಂಜಯ್ ರಾವತ್ ಅವರು ಮುಂದಿನ ಐದು ವರ್ಷಗಳ ಕಾಲ ಉದ್ಭವ್ ಠಾಕ್ರೆ ಅವರೇ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಸಖ್ಯ ಬೆಳೆಸಿದ್ದ ಅಜಿತ್ ಪವಾರ್ ಅವರು ಇದೀಗ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮರಳಿ ನಮ್ಮ ಮೈತ್ರಿ ಪಾಳಯವನ್ನು ಸೇರಿದ್ದಾರೆ ಎಂದು ರಾವತ್ ಅವರು ಇದೇ ಸಂದರ್ಭದಲ್ಲಿ ಹೇಳಿದರು. ಅಜಿತ್ ಪವಾರ್ ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿದೆ ಎಂದೂ ಸಹ ಸಾವಂತ್ ಇದೇ ಸಂದರ್ಭದಲ್ಲಿ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next