Advertisement

ಠಾಕ್ರೆ ಗೂಂಡಾಗಿರಿ ಕೊನೆಗಾಣಬೇಕು : ಸಂಸದೆ ನವನೀತ್ ರಾಣಾ ಮನವಿ

05:39 PM Jun 25, 2022 | Team Udayavani |

ಮುಂಬಯಿ : ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಗೂಂಡಾಗಿರಿ ಕೊನೆಗಾಣಬೇಕು ಮತ್ತು ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಬೇಕು ಎಂದು ಅಮರಾವತಿ ಪಕ್ಷೇತರ ಸಂಸದೆ ನವನೀತ್ ರಾಣಾ ಮನವಿ ಮಾಡಿದ್ದಾರೆ.

Advertisement

ಉದ್ಧವ್ ಠಾಕ್ರೆ ಅವರ ವಿರುದ್ಧ ಬಂಡೆದ್ದು, ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುವ, ಬಾಳಾಸಾಹೇಬ್ ಅವರ ಸಿದ್ಧಾಂತದೊಂದಿಗೆ ಸಂಪರ್ಕ ಹೊಂದಿರುವ ಶಾಸಕರ ಕುಟುಂಬಗಳಿಗೆ ಭದ್ರತೆ ಒದಗಿಸುವಂತೆ ನಾನು ಅಮಿತ್ ಶಾ ಅವರನ್ನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಮನೆ ಮುಂದೆ ಹನುಮಾನ್‌ ಚಾಲೀಸಾ ಪಠಿಸುವುದಾಗಿ ಸವಾಲು ಹಾಕಿದ್ದ ನವನೀತ್‌ ಕೌರ್‌ ಮತ್ತು ಪತಿ ರವಿ ರಾಣಾ ರಾಜದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ಪಡೆದಿದ್ದರು.

ಇದನ್ನೂ ಓದಿ : ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ಆಗುವುದರಲ್ಲಿ ಸಂದೇಹವಿಲ್ಲ: ಮುರುಗೇಶ್ ನಿರಾಣಿ

Advertisement

Udayavani is now on Telegram. Click here to join our channel and stay updated with the latest news.

Next