Advertisement

Udupi: ನಾಪತ್ತೆಯಾಗಿದ್ದ ಬ್ರಹ್ಮಾವರದ ಬಾಲಕ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆ

11:43 AM Sep 09, 2024 | Team Udayavani |

ಉಡುಪಿ: ಕಡಿಯಾಳಿಯ ಕೋಚಿಂಗ್ ಸೆಂಟರ್‌ ಗೆ ಹೋಗಿದ್ದ ವೇಳೆ ನಾಪತ್ತೆಯಾಗಿದ್ದ ಬ್ರಹ್ಮಾವರ ಹಂದಾಡಿ ಬಾರಕೂರು ರಸ್ತೆಯ ನಿವಾಸಿ ಪ್ರಕಾಶ್ ಎಂಬವರ ಪುತ್ರ ಆರ್ಯ (13) ಸೋಮವಾರ (ಸೆ.09) ಬೆಳಗ್ಗೆ ಕೇರಳದ ಪಾಲ್ಘಾಟ್ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

Advertisement

ರವಿವಾರ ಬೆಳಗ್ಗೆ ಉಡುಪಿ ಕಡಿಯಾಳಿಯಲ್ಲಿರುವ ಕೋಚಿಂಗ್ ಇನ್ ಸ್ಟಿಟ್ಯೂಟ್ ಗೆಂದು ಹೋಗಿದ್ದ ಎಂಟನೇ ತರಗತಿಯ ವಿದ್ಯಾರ್ಥಿ ಅರ್ಯ, ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ಕ್ಯಾಮರಾ ಪರಿಶೀಲಿಸಿದಾಗ ಆರ್ಯ, ಇಂದ್ರಾಳಿ ರೈಲು ನಿಲ್ದಾಣದಿಂದ ರೈಲಿನ ಮೂಲಕ ಕೇರಳದ ಕಡೆ ತೆರಳಿರುವುದು ಕಂಡುಬಂತು. ಅತ್ತ ಟಿಕೆಟ್ ಇಲ್ಲದೆ ಪ್ರಯಾಣಿಸಿದ ಆರ್ಯನನ್ನು ಪಾಲ್ಘಾಟ್ ರೈಲ್ವೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next