Advertisement

ಉಡುಪಿ: ಎಎಸ್‌ಐ ಪ್ರಕಾಶ್‌ ಅವರಿಗೆ ರಾಷ್ಟ್ರಪತಿ ಪೊಲೀಸ್‌ ಪದಕ

03:37 PM Jan 25, 2021 | Team Udayavani |

ಉಡುಪಿ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯ ಕ್ರೈಂ ರೆಕಾರ್ಡ್‌ ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಕಾಶ್‌ ಅವರು ರಾಷ್ಟ್ರಪತಿ ಪೊಲೀಸ್‌ ಪದಕಕ್ಕೆ ಭಾಜನವಾಗಿದ್ದಾರೆ.

Advertisement

ಬಿ.ಕಾಂ ಪದವೀಧರರಾದ ಇವರು 1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡಿದ್ದರು. ಪೊಲೀಸ್‌ ಇಲಾಖೆಗೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳಲ್ಲಿ ಇವರು ಭಾಗವಹಿಸಿದ್ದಾರೆ.  ಅಪರಾಧ ಚಟುವಟಿಕೆಗಳ ದಾಖಲೀಕರಣ, ಅಪಘಾತ ಹಾಗೂ ಆತ್ಮಹತ್ಯೆ ಪ್ರಕರಣಗಳನ್ನು ಸ್ಪಷ್ಟವಾಗಿ ದಾಖಲಿಸುತ್ತಿದ್ದರು.

ಇದನ್ನೂ ಓದಿ:ಬೆಂಗಳೂರಿನಲ್ಲಿ ದಿನಕ್ಕೆರಡು ಅಪಘಾತ, ಕನಿಷ್ಠ 2 ಸಾವು! ದ್ವಿಚಕ್ರ ಸವಾರರಿಂದಲೇ ಅಪಘಾತ ಅಧಿಕ

ಇತ್ತೀಚೆಗೆ ನಡೆದ ಚುನಾವಣೆಯ ಸಂದರ್ಭದಲ್ಲಿಯೂ ಇವರು ಉತ್ತಮವಾಗಿ ಕಾರ್ಯನಿರ್ವಹಿಸಿ ಪ್ರಶಂಸೆಗೆ ಪಾತ್ರರಾಗಿದ್ದರು. ಇದಷ್ಟೇ ಅಲ್ಲದೆ ಪೊಲೀಸ್‌ ಇಲಾಖೆಯ ವಿವಿಧ ಕಾರ್ಯಾಚರಣೆಗಳನ್ನು ಭಾಗವಹಿಸಿ ಅಪರಾಧಿಗಳನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಿದ್ದರು. ಗಂಗೊಳ್ಳಿ, ಬ್ರಹ್ಮಾವರ, ಮಣಿಪಾಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲವಾರು ಪ್ರಕರಣಗಳನ್ನು ಭೇದಿಸುವಲ್ಲಿ ಇವರು ಸಹಕರಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next