Advertisement

Udupi: ಇಂದ್ರಾಳಿಯಲ್ಲಿ ಬಸ್ ಗೆ ಬೈಕ್ ಢಿಕ್ಕಿಯಾಗಿ ಸವಾರ ಗಂಭೀರ

05:58 PM Feb 11, 2024 | Team Udayavani |

ಉಡುಪಿ: ಖಾಸಗಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಸವಾರ ಗಂಭೀರ ಗಾಯಗೊಂಡ ಘಟನೆ ರವಿವಾರ ಸಂಜೆ ಇಂದ್ರಾಳಿಯಲ್ಲಿ ನಡೆದಿದೆ.

Advertisement

ಮಂಗಳೂರಿನಿಂದ ಮಣಿಪಾಲಕ್ಕೆ ಆಗಮಿಸುತ್ತಿದ್ದ ಖಾಸಗಿ ಎಕ್ಸ್ ಪ್ರೆ ಸ್ ಬಸ್ ಗೆ ಇಂದ್ರಾಳಿ ಡಿವೈಡರ್ ಬಳಿ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಬಸ್ ನ ಅಡಿ ಭಾಗಕ್ಕೆ ಹೋಗಿದೆ. ಘಟನಾ ಸ್ಥಳದಲ್ಲಿ ಕೆಲವು ಕಾಲ ಟ್ರಾಫಿಕ್ ದಟ್ಟನೆ ಉಂಟಾಯಿತು. ಮಣಿಪಾಲ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಸಂಚಾರ ದಟ್ಟನೆ ನಿಯಂತ್ರಿಸಿದರು. ಗಾಯಾಳು ಬೈಕ್ ಸವಾರನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next