Advertisement

Udupi: ಕಾಡಬೆಟ್ಟುವಿನ ಮನೆಯಲ್ಲಿ ಕಳ್ಳತನ; ಪ್ರಕರಣ ದಾಖಲು

07:57 PM Aug 18, 2024 | Team Udayavani |

ಉಡುಪಿ: ಕಾಡಬೆಟ್ಟುವಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಸುಮಾರು 5 ಗ್ರಾಂಗಳಷ್ಟು ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎನ್ನಲಾಗುತ್ತಿದ್ದು, ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಾಡಬೆಟ್ಟುವಿನ ಎಲ್.ಐ.ಸಿ. ಕಾಲನಿಯಲ್ಲಿರುವ ಪ್ರಶಾಂತ್‌ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕಳೆದ ಒಂದು ತಿಂಗಳಿನಿಂದ ಪ್ರಶಾಂತ್‌ ಅವರು ಬೆಂಗಳೂರಿನಲ್ಲಿ ವಾಸಮಾಡಿಕೊಂಡಿದ್ದರು. ರವಿವಾರ ಬೆಳಗ್ಗೆ ಮನೆಯ ಬಾಗಿಲು ಒಡೆದಿದ್ದನ್ನು ನೋಡಿದ ಸ್ಥಳೀಯರು ಈ ಬಗ್ಗೆ ಅವರ ಸಂಬಂಧಿಕರಿಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಕಳ್ಳರು ಮನೆಯ ಮುಖ್ಯ ಬಾಗಿಲನ್ನು ಯಾವುದೋ ವಸ್ತುವಿನಿಂದ ಮೀಟಿ ಮುರಿದು ಒಳಗೆ ಪ್ರವೇಶಿಸಿ, ಕಳ್ಳತನಕ್ಕೆ ಪ್ರಯತ್ನಿಸಿದ್ದಾರೆ. ಮತ್ತಷ್ಟು ಹೆಚ್ಚಿನ ವಸ್ತುಗಳು ಕಳವಾಗಿದೆಯಾ ಎಂಬ ಬಗ್ಗೆ ಪ್ರಶಾಂತ್‌ ಅವರು ಬಂದ ಅನಂತರವಷ್ಟೇ ಮಾಹಿತಿ ಸಿಗುವ ಸಾಧ್ಯತೆಗಳಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಖಾಲಿಮನೆಗಳಿಗೆ ಕನ್ನ

ಇತ್ತೀಚಿನ ದಿನಗಳಲ್ಲಿ ಕಳ್ಳರು ಖಾಲಿ ಮನೆಗಳನ್ನೇ ಕೇಂದ್ರೀಕರಿಸಿಕೊಂಡು ಕಳ್ಳತನ ನಡೆಸುತ್ತಿದ್ದಾರೆ. ನಗರದಲ್ಲಿ ಈ ತಿಂಗಳು ಈಗಾಗಲೇ 4ಕ್ಕೂ ಅಧಿಕ ಕಳ್ಳತನ ಪ್ರಕರಣಗಳು ವರದಿಯಾಗಿದ್ದು, ಇದುವರೆಗೂ ಯಾರು ಕೂಡ ಪತ್ತೆಯಾಗಿಲ್ಲ. ಪೊಲೀಸರು ವಿವಿಧ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದರೂ ಯಾವುದೇ ಕುರುಹು ಪತ್ತೆಯಾಗದಿರುವುದು ಸ್ಥಳೀಯರ ಆತಂಕಕ್ಕೂ ಕಾರಣವಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next