Advertisement

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

08:59 PM Sep 20, 2024 | Team Udayavani |

ಉಡುಪಿ: ಬಸ್‌ನಲ್ಲಿ ನಿಗದಿತ ಸಂಖ್ಯೆಗಿಂತ ಅಧಿಕ ಪ್ರಯಾಣಿಕರನ್ನು ತುಂಬಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಕರೆದುಕೊಂಡು ಹೋಗುತ್ತಿದ್ದ ಬಸ್‌ ನಿರ್ವಾಹಕನ ಮೇಲೆ ಪ್ರಕರಣ ದಾಖಲಿಸಲಾಗಿದೆ.

Advertisement

ಸಂಚಾರ ಠಾಣೆಯ ಸಹಾಯಕ ಪೊಲೀಸ್‌ ಉಪನಿರೀಕ್ಷಕ ಚಂದ್ರಶೇಖರ್‌ ಅವರು ಶಾರದಾ ಕಲ್ಯಾಣ ಮಂಟಪದ ಬಳಿ ಕರ್ತವ್ಯ ನಿರ್ವಹಿಸಿಕೊಂಡಿದ್ದ ವೇಳೆ ಉಡುಪಿ- ಮಣಿಪಾಲ ರಸ್ತೆಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ ನಿರ್ವಾಹಕ ತನ್ನ ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಯಾಣಿಕರನ್ನು ತುಂಬಿಸಿಕೊಂಡು ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಕರನ್ನು ಬಸ್ಸಿನ ಫ‌ುಟ್‌ಬೋರ್ಡ್‌ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಿದ್ದ. ಚಾಲಕ ಪ್ರಸಾದ್‌ ಎಂಬಾತ ಅಪಾಯಕಾರಿ ರೀತಿಯಲ್ಲಿ ಬಸ್‌ ಅನ್ನು ಚಲಾಯಿಸುತ್ತಿದ್ದ. ಈ ಬಗ್ಗೆ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next