Advertisement

Udupi ನಾಲ್ವರ ಕೊಲೆ ಪ್ರಕರಣ: ಆರೋಪಿಯ ನಿವಾಸದಲ್ಲಿ ಆಯುಧ ವಶಕ್ಕೆ

11:23 PM Nov 18, 2023 | Team Udayavani |

ಉಡುಪಿ: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಶನಿವಾರವೂ ವಿವಿಧ ಸ್ಥಳಗಳಲ್ಲಿ ಪೊಲೀಸರು ಮಹಜರಿಗೆ ಒಳಪಡಿಸಿದರು.

Advertisement

ಕೃತ್ಯಕ್ಕೆ ಬಳಸಲಾದ ಚೂರಿಯನ್ನು ಮಂಗಳೂರಿನ ಬಿಜೈನಲ್ಲಿರುವ ಆತನ ಫ್ಲ್ಯಾಟ್‌ನಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮನೆಯೊಳಗೆಯೇ ಅದನ್ನು ಬಚ್ಚಿಟ್ಟುಕೊಂಡಿದ್ದ ಆತ ಪೊಲೀಸರಿಗೆ ವಿವಿಧ ಕಥೆ ಹೇಳಿ ತನಿಖೆಯ ದಿಕ್ಕು ತಪ್ಪಿಸಲು ಯತ್ನಿಸಿದ್ದ. 2 ದಿನಗಳಿಂದ ಪೊಲೀಸರು ಮೂಲ್ಕಿ, ಕೂಳೂರು ಸೇತುವೆ ಬದಿ ಸಹಿತ ಶುಕ್ರವಾರ ಪದವಿನಂಗಡಿ, ಕೊಂಚಾಡಿಯ ರವಿಶಂಕರ ವಿದ್ಯಾಮಂದಿರದ ಬಳಿ ವ್ಯಾಪಕ ಶೋಧ ಕಾರ್ಯ ನಡೆಸಿದ್ದರೂ ಚೂರಿ ಪತ್ತೆಯಾಗಿರಲಿಲ್ಲ.

ಶನಿವಾರ ಆತನನ್ನು ಹೆಚ್ಚಿನ ವಿಚಾರಣೆಗೊಳಪಡಿಸಿ ಬಿಜೈನಲ್ಲಿರುವ ಆತನ ಫ್ಲ್ಯಾಟ್‌ಗೆ ಕರೆದುಕೊಂಡು ಹೋದ ವೇಳೆ ಚೂರಿ ಇರಿಸಿದ ಜಾಗವನ್ನು ತಿಳಿಸಿದ್ದಾನೆ ಎನ್ನಲಾಗಿದೆ.

ಕೃತ್ಯಕ್ಕೆ ಬಳಸಿದ ಮಾಸ್ಕ್, ರಕ್ತಸಿಕ್ತ ಬಟ್ಟೆ, ಬಳಸಿದ ಕಾರು ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಪೋಷಕರಿಂದ ವರಿಷ್ಠಾಧಿಕಾರಿಗಳ ಭೇಟಿ
ಶನಿವಾರ ನೂರ್‌ ಮೊಹಮ್ಮದ್‌, ಪುತ್ರ ಆಸಾದ್‌, ಮೃತ ಹಸೀನಾರ ಸಹೋದರ ಅಶ್ರಫ್, ಅವರ ಮಗಳು ಫಾತಿಮಾ ಆಸ್ಪಾ ಸಹಿತ ಮನೆಮಂದಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ.ಅವರನ್ನು ಭೇಟಿ ಮಾಡಿದರು.

Advertisement

ಬಳಿಕ ಮಾತನಾಡಿದ ಪೊಲೀಸ್‌ ವರಿಷ್ಠಾಧಿಕಾರಿಯವರು, ತನಿಖೆ ಸಂಪೂರ್ಣಗೊಂಡ ಬಳಿಕ ಹೆಚ್ಚಿನ ವಿವರ ನೀಡಲಾಗುವುದು ಎಂದರು.

 

Advertisement

Udayavani is now on Telegram. Click here to join our channel and stay updated with the latest news.

Next