Advertisement

Udupi Chikkmagalur ಸಂಸದರ ಕಚೇರಿ ಉದ್ಘಾಟನೆ: ಜನರಿಗೆ ಉತ್ತಮ ಸೇವೆ ದೊರೆಯಲಿ: ಗುಜ್ಜಾಡಿ

12:36 AM Jul 16, 2024 | Team Udayavani |

ಮಣಿಪಾಲ: ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿ.ಪಂ. ಕಚೇರಿಯ ಸಿ ಬ್ಲಾಕ್‌ನಲ್ಲಿ ಸೋಮವಾರ ಸಂಸದರ ಅಧಿಕೃತ ಕಚೇರಿಯನ್ನು ಬಿಜೆಪಿಯ ಹಿರಿಯ ಮುಖಂಡರಾದ ಗುಜ್ಜಾಡಿ ಪ್ರಭಾಕರ್‌ ನಾಯಕ್‌ ಅವರು ಉದ್ಘಾಟಿಸಿ, ಈ ಕಚೇರಿಯ ಮೂಲಕ ಜನರಿಗೆ ಇನ್ನಷ್ಟು ಸೇವೆ ದೊರೆಯಲಿ ಎಂದು ಶುಭ ಹಾರೈಸಿದರು.

Advertisement

ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಜನರ ಮನವಿ ಸ್ವೀಕಾರ, ಕುಂದುಕೊರತೆಗಳನ್ನು ಆಲಿಸುವ ಜತೆಗೆ ಕೇಂದ್ರ ಸರಕಾರದ ಯೋಜನೆಯನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಕಚೇರಿ ಕಾರ್ಯನಿರ್ವಹಿ ಸಲಿದೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ ಕುಮಾರ್‌ ಕುಂದಾಪುರ, ಶಾಸಕರಾದ ಯಶ್‌ಪಾಲ್‌ ಸುವರ್ಣ, ಕಿರಣ್‌ ಕುಮಾರ್‌ ಕೊಡ್ಗಿ, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌, ಮಾಜಿ ಶಾಸಕ ಲಾಲಾಜಿ ಆರ್‌. ಮೆಂಡನ್‌, ದ.ಕ. ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ, ವಿಭಾಗ ಪ್ರಭಾರಿ ಉದಯ ಕುಮಾರ್‌ ಶೆಟ್ಟಿ, ಪ್ರಮುಖರಾದ ದಿನಕರ ಶೆಟ್ಟಿ ಹೆರ್ಗ, ರೇಶ್ಮಾ ಉದಯ ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಶ್ರೀಶ ನಾಯಕ್‌, ಕಿರಣ್‌ ಕುಮಾರ್‌, ಕುಯಿಲಾಡಿ ಸುರೇಶ್‌ ನಾಯಕ್‌, ಸತ್ಯಾನಂದ ನಾಯಕ್‌, ನವೀನ್‌ ಶೆಟ್ಟಿ ಕುತ್ಯಾರು, ರಾಜೇಶ್‌ ಕಾವೇರಿ, ಐರೋಡಿ ವಿಟ್ಠಲ ಪೂಜಾರಿ, ಪೃಥ್ವಿರಾಜ್‌ ಶೆಟ್ಟಿ ಬಿಲ್ಲಾಡಿ, ಶಿವಕುಮಾರ್‌ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ, ಶ್ಯಾಮಲಾ ಕುಂದರ್‌, ಸಂಸದರ ಪತ್ನಿ ಶಾಂತಾ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next