Advertisement

ಉಡುಪಿ ಚಿಕ್ಕಮಗಳೂರು ಕ್ಷೇತ್ರ ಕಾಂಗ್ರೇಸ್‌ಗೆ ನೀಡಲು ಸಾಧ್ಯವಿಲ್ಲ

01:19 AM Mar 21, 2019 | Team Udayavani |

ಬೆಂಗಳೂರು: ಉಡುಪಿ ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿರುವುದನ್ನು ಕಾಂಗ್ರೆಸ್‌ಗೆ ವಾಪಸ್‌ ಪಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್‌ ನಾಯಕರು ಎರಡೂ ಜಿಲ್ಲೆಗಳ ಮುಖಂಡರಿಗೆ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್‌ಗೆಬಿಟ್ಟುಕೊಟ್ಟಿರುವ ಉಡುಪಿ-ಚಿಕ್ಕ ಮಗಳೂರು ಕ್ಷೇತ್ರವನ್ನು ಕಾಂಗ್ರೆಸ್‌ಗೆ
ವಾಪಸ್‌ ಪಡೆದುಕೊಳ್ಳಬೇಕು ಎಂದು ಎರಡೂ ಜಿಲ್ಲೆಗಳ ಮುಖಂಡರು ನಾಯಕರಿಗೆ ಮನವಿ ಮಾಡಿದ್ದಾರೆ. ಸಭೆಯ ಬಳಿಕ ಮಾತನಾಡಿದ ಪ್ರಮೋದ್‌ ಮಧ್ವರಾಜ್‌, ಜೆಡಿಎಸ್‌ ನಾಯಕರು ಅಭ್ಯರ್ಥಿಯಾಗುವಂತೆ ಕೇಳಿದ್ದಾರೆ. ನಾವು ಕಾಂಗ್ರೆಸ್‌ಗೆ ಕ್ಷೇತ್ರ ಬಿಟ್ಟುಕೊಡಿ ಎಂದು ಕೇಳಿದ್ದೇವೆ. ಒಂದು ವೇಳೆ ಕ್ಷೇತ್ರ ಬಿಟ್ಟುಕೊಡದಿದ್ದರೆ, ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಸಿದ್ದ. ಅದು ಕಾಂಗ್ರೆಸ್‌ ಹೈ ಕಮಾಂಡ್‌ ಒಪ್ಪಿದರೆ ಮಾತ್ರ ಸ್ಪರ್ಧೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next