Advertisement

ಉಡುಪಿ: ಮಾದಕ ವಸ್ತು ಸಾಗಾಟ…ಕಾಲೇಜು ವಿದ್ಯಾರ್ಥಿಗಳ ಅಮಾನತು

09:02 PM Feb 15, 2023 | Team Udayavani |

ಉಡುಪಿ: ನಗರದ ಕಾಲೇಜಿನ ವಿದ್ಯಾರ್ಥಿಗಳು ಮಾದಕ ವಸ್ತು ಸಾಗಾಟ ಸೇವನೆಯಲ್ಲಿ ಶಾಮೀಲಾದ ಹಿನ್ನೆಲೆಯಲ್ಲಿ ಅವರನ್ನು ಕಾಲೇಜು ಆಡಳಿತ ಮಂಡಳಿ ಅಮಾನತು ಮಾಡಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಕೆ ಅಕ್ಷಯ್‌ ಮಚ್ಚೀಂದ್ರ ತಿಳಿಸಿದ್ದಾರೆ.

Advertisement

ಪೊಲೀಸರು ಮಾದಕ ವಸ್ತುಗಳ ಸಾಗಾಟ, ಸೇವನೆ ಮಾಡುವವರ ಬಗ್ಗೆ ನಿಗಾ ಇರಿಸಿದ್ದು, ಪ್ರಕರಣಗಳನ್ನು ದಾಖಲಿಸಿ ನಿಯಂತ್ರಣ ಮಾಡುತ್ತಿದ್ದಾರೆ.

ಕೆಲವು ಮಂದಿ ವಿದ್ಯಾರ್ಥಿಗಳು ಕೂಡ ಮಾದಕ ದ್ರವ್ಯ ಸಾಗಾಟದಲ್ಲಿ ನಿರತರಾಗಿದ್ದಾರೆ ಎನ್ನುವ ಅಂಶ ತನಿಖೆಯಿಂದ ಬೆಳಕಿಗೆ ಬಂದಿದ್ದು, ಕಾಲೇಜಿನ ಆಡಳಿತ ಮಂಡಳಿಗೆ ಈ ವಿಚಾರ ತಿಳಿಸಲಾಗಿದೆ. ಕ್ರಿಮಿನಲ್‌ ಕೃತ್ಯದಲ್ಲಿ ಯಾರೇ ಭಾಗಿಯಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸವದತ್ತಿ: ಸಮರ್ಪಕ ವೇತನ ಪಾವತಿಗೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಧರಣಿ

Advertisement

Udayavani is now on Telegram. Click here to join our channel and stay updated with the latest news.

Next