Advertisement

ಉಡುಪಿ : ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವು

07:44 PM Jul 29, 2022 | Team Udayavani |

ಉಡುಪಿ: ಶ್ರೀ ಕೃಷ್ಣ ಮಠದ ಪುತ್ತಿಗೆ ಮಠದಲ್ಲಿ 7 ಲಕ್ಷ ರೂ. ಮೌಲ್ಯದ ಚಿನ್ನದ ಗಿಂಡಿ ಕಳವಾಗಿರುವ ಘಟನೆ ನಡೆದಿದೆ.

Advertisement

ಜು.26 ರಂದು ಬೆಳಿಗ್ಗೆ ಮಠದಲ್ಲಿ ಪೂಜೆಯ ಸಂದರ್ಭದಲ್ಲಿ 6 ಜನ ಮಠದ ವಿದ್ಯಾರ್ಥಿಗಳು ಮತ್ತು ಪುರೋಹಿತ ಲಕ್ಷ್ಮಿ ಪ್ರಸಾದ್ ರವರು ಬಂದು ಹೋಗಿದ್ದು, ಪೂಜೆಯ ನಂತರ ಪೂಜಾ ಸಾಮಾಗ್ರಿಗಳನ್ನು ತೆಗೆದು ಇಡುವಾಗ 7 ಲಕ್ಷ ರೂಪಾಯಿ ಮೌಲ್ಯದ 146 ಗ್ರಾಂ ತೂಕದ ಚಿನ್ನದ ಗಿಂಡಿ ಕಾಣೆಯಾಗಿದ್ದು ಗಮನಕ್ಕೆ ಬಂದಿದೆ.

ಈ ಚಿನ್ನದ ಗಿಂಡಿಯನ್ನು ಪುರೋಹಿತ ಲಕ್ಷ್ಮಿ ಪ್ರಸಾದ್ ರವರು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಅನುಮಾನ ಇರುವುದಾಗಿ ಪುತ್ತಿಗೆ ಮಠದಲ್ಲಿ ವ್ಯವಸ್ಥಾಪಕರಾಗಿರುವ ವಿಷ್ಣುಮೂರ್ತಿ ಇವರು ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಸಚಿವ ಸುಧಾಕರ್ ಬಳಿಗೆ ಚಾಕು ಇಟ್ಟುಕೊಂಡು ಬಂದ ಯುವಕ ಪೊಲೀಸ್ ವಶಕ್ಕೆ

Advertisement

Udayavani is now on Telegram. Click here to join our channel and stay updated with the latest news.

Next