Advertisement

ಉಡುಪಿ : 14 ಬೇಡಿಕೆಗಳಿಗೆ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ದಲಿತ ಸಂಘರ್ಷ ಸಮಿತಿ ಮನವಿ

01:35 PM Jun 01, 2021 | Team Udayavani |

ಉಡುಪಿ : ದಲಿತ ಸಂಘರ್ಷ ಸಮಿತಿಗಳ ವಕ್ಕೂಟದ ವತಿಯಿಂದ ರಾಜ್ಯಾದ್ಯಂತ 31 – 05 – 2021 ರಂದು ನಡೆದ ಆಗ್ರಹ ಮಂಡನೆಯ ಪ್ರಯುಕ್ತ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ನಿನ್ನೆ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಹಕ್ಕೋತ್ತಾಯ ನಡೆಸಲಾಯಿತು.

Advertisement

ನಿನ್ನೆ ನಡೆದ ಆಗ್ರಹದ ಮನವಿಯನ್ನು ಉಡುಪಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರಿಗೆ ಸಲ್ಲಿಸಿ , ಮುಖ್ಯಮಂತ್ರಿ ಯವರಿಗೆ ಕಳುಹಿಸಲಾಯಿತು.

ಉಡುಪಿ ಅಪರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದ ನಿಯೋಗದಲ್ಲಿ ದ.ಸಂ.ಸ. ಜಿಲ್ಲಾ ಪ್ರಧಾನ ಸಂಚಾಲಕರಾದ ಶ್ರೀ. ಸುಂದರ ಮಾಸ್ತರ್ , ಜಿಲ್ಲಾ ಸಂಘಟನಾ ಸಂಚಾಲಕರಾದ ಶ್ರೀ. ಶ್ಯಾಮರಾಜ್ ಬಿರ್ತಿ , ಪರಮೇಶ್ವರ್ ಉಪ್ಪೂರು , ಭಾಸ್ಕರ್ ಮಾಸ್ಟರ್ ಕುಂಜಿಬೆಟ್ಟು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next