Advertisement

ಉಡುಪಿ ಇನ್ನು 2ದಿನ ಮಳೆ: ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

05:19 PM Sep 20, 2020 | sudhir |

ಉಡುಪಿ : ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ ನದಿ ತೀರದ ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿದ್ದು ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ನದಿ ತೀರದ ನಿವಾಸಿಗಳು ಹಾಗೂ ಕುದ್ರುಗಳಲ್ಲಿ ವಾಸಿಸುವ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Advertisement

ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆ.ಮೀ ಮಳೆಯಾಗಿದ್ದು ಜಿಲ್ಲೆಯ ಹೆಚ್ಚಿನ ಪ್ರದೇಶಗಳು ಪ್ರವಾಹಕ್ಕೆ ಒಳಗಾಗಿದ್ದು ಇದರಿಂದ ಜಿಲ್ಲೆಯಲ್ಲಿ ಪ್ರವಾಹದಲ್ಲಿ ಸಿಲುಕಿಕೊಂಡ 700 ಕುಟುಂಬಗಳ 2500 ಕ್ಕೂ ಹೆಚ್ಚಿನ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕೆಲಸಗಳನ್ನು NDRF, ಕರಾವಳಿ ರಕ್ಷಣಾ ಪಡೆ, ಸ್ಥಳೀಯ ಸಂಘ ಸಂಸ್ಥೆಗಳು ಕೈಜೋಡಿಸಿ ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ನೆರವಾದರು.

ಈಗಾಗಲೇ ಜಿಲ್ಲೆಯ ತಹಶೀಲ್ದಾರ್ ತಂಡ ಪರಿಹಾರ ಕೇಂದ್ರಗಳನ್ನು ಗುರುತಿಸಿದ್ದು ನದಿ ತೀರದ ವಾಸಿಗಳು ಇಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಜಿಲ್ಲಾಡಳಿತದಿಂದ ಊಟ ತಿಂಡಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next