Advertisement

ಭಾನುವಾರದ ಲಾಕ್ ಡೌನ್: ಈಗಾಗಲೇ ನಿಗದಿಯಾಗಿರುವ ವಿವಾಹ ಕಾರ್ಯಕ್ರಮಕ್ಕೆ ಇದೆಯೇ ಅನುಮತಿ?

06:33 PM Jul 04, 2020 | keerthan |

ಉಡುಪಿ: ವೇಗವಾಗಿ ಹಬ್ಬುತ್ತಿರುವ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ತರುವ ಸಲುವಾಗಿ ಭಾನುವಾರ ಲಾಕ್ ಡೌನ್ ಮಾಡಲು ಸರಕಾರ ನಿರ್ಧರಿಸಿದೆ. ಹೀಗಾಗಿ ಅಗತ್ಯ ಸೇವೆ ಹೊರತು ಪಡಿಸಿ ಬೇರೆ ಚಟುವಟಿಕೆಗಳಿಗೆ ಜಿಲ್ಲೆಯಲ್ಲಿ ಅನುಮತಿ ನೀಡಲಾಗುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ ಜಗದೀಶ್ ಅವರು ಹೇಳಿದ್ದಾರೆ.

Advertisement

ಈ ಕುರಿತು ಮಾಹಿತಿ ನೀಡಿದ ಅವರು, ಭಾನುವಾರ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಜಿಲ್ಲೆಯಲ್ಲಿ ಅಗತ್ಯ ಸೇವೆಗಳಾದ ಮೆಡಿಕಲ್ ಶಾಪ್, ಆಸ್ಪತ್ರೆ, ಹಾಲು, ಪೇಪರ್ ಗಳಿಗೆ ಅವಕಾಶವಿದೆ. ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿರುತ್ತದೆ ಎಂದರು.

ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಆದರೆ 50 ಜನರಿಗಿಂತ ಹೆಚ್ಚಿನ ಜನರು ಸೇರುವಂತಿಲ್ಲ. ಸರಿಯಾದ ಮುಂಜಾಗೃತ ಕ್ರಮಗಳೊಂದಿಗೆ, ತಹಶೀಲ್ದಾರರ ಅನುಮತಿ ಪಡೆದು, ಕಾರ್ಯಕ್ರಮ ನಡೆಸಬಹುದು ಎಂದು ಡಿಸಿ ಹೇಳಿದರು.

ಇದನ್ನೂ ಓದಿ: ಉಡುಪಿಯ ಹೋಟೆಲ್ ಮಾಲಕರೊಬ್ಬರಿಗೆ ಸೋಂಕು ದೃಢ: ಹೋಟೆಲ್ ಸೀಲ್ ಡೌನ್

Advertisement

ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿರುತ್ತದೆ. ಹಾಗಾಗಿ ಅನಗತ್ಯವಾಗಿ ಯಾರೂ ಓಡಾಡುವಂತಿಲ್ಲ. ನಿಯಮ ಉಲ್ಲಂಘಿಸಿ ಯಾರಾದರೂ ಓಡಾಟ ನಡೆಸಿದರೆ ಅವರ ವಾಹನಗಳನ್ನು ಮುಟ್ಟಗೋಲು ಹಾಕಿ, ಪ್ರಕರಣ ದಾಖಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next