Advertisement

ಸಾರ್ವಜನಿಕ ಪ್ರಶಂಸೆಗೆ ಪಾತ್ರರಾದ ಉಡುಪಿ ಜಿಲ್ಲಾಧಿಕಾರಿ

10:04 AM Mar 18, 2020 | sudhir |

ಕಾಪು: ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೊಳಗಾಗಿ, ಗಾಯಗೊಂಡಿದ್ದ ಗಾಯಗಳುಗಳನ್ನು ತನ್ನದೇ ವಾಹನದಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಉಡುಪಿ ಜಿಲ್ಲಾಧಿಕಾರಿ ಮಾನವೀಯತೆ ಮೆರೆದಿದ್ದಾರೆ.

Advertisement

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೈಕ್ ಗಳ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಗಾಯಗೊಂಡಿದ್ದರು.

ಗಾಯಗೊಂಡವರನ್ನು ತಮ್ಮ ವಾಹನದಲ್ಲಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮೂಲಕ ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಸಾರ್ವಜನಿಕ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಬೈಕ್ ಡಿಕ್ಕಿ ಸಂಧರ್ಭ ಗಾಯಾಳುಗಳನ್ನು ಸಾಗಿಸಲು ಯಾವುದೇ ವಾಹನ ಲಭ್ಯವಾಗದೆ ಸ್ಥಳೀಯರು ಪರದಾಡುತಿದ್ದಾಗ ಅದೇ ದಾರಿಯಾಗಿ ಮಂಗಳೂರು ಕಡೆಯಿಂದ ಬಂದ ಜಿಲ್ಲಾಧಿಕಾರಿಗಳು ವಾಹನ ನಿಲ್ಲಿಸಿ ತಮ್ಮ ವಾಹನದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಿಬ್ಬಂದಿಗೆ ಸೂಚಿಸಿದರು.

Advertisement

ಸಿಬ್ಬಂದಿಗಳು ಅವರನ್ನು ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಿ ಹಿಂತಿರುಗಿ ಬರುವವರಿಗೆ ಅಪಘಾತ ನಡೆದ ಸ್ಥಳದಲ್ಲಿದ್ದು ಪರಿಶೀಲನೆ ನಡೆಸಿದರು.

ಮಾನವೀಯತೆ ಮೆರೆದ ಜಿಲ್ಲಾಧಿಕಾರಿಗಳ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next