Advertisement

ಅನಗತ್ಯ ಓಡಾಟ ನಡೆಸಿದ ವಾಹನ ಸವಾರರಿಗೆ ಬಿಸಿ ಮುಟ್ಟಿಸಿದ ಉಡುಪಿ ಡಿಸಿ

05:15 PM May 28, 2021 | Team Udayavani |

ಮಣಿಪಾಲ: ಇಂದು ಮಣಿಪಾಲದಲ್ಲಿ ಸ್ವತಃ ಅಖಾಡಕ್ಕಿಳಿದ  ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಅನಗತ್ಯವಾಗಿ ಓಡಾಟ ನಡೆಸುತ್ತಿದ್ದವರಿಗೆ ಬಿಸಿ ಮುಟ್ಟಿಸಿದರು. ಸುಮಾರು 35 ವಾಹನಗಳನ್ನು ವಶಕ್ಕೆ ಪಡೆದು ದಂಡ ವಿಧಿಸಿದ್ದಾರೆ.

Advertisement

ಮಣಿಪಾಲ ಸರ್ಕಲ್ ಇನ್ಸ್‌ಪೆಕ್ಟರ್ ಮಂಜುನಾಥ್ ಗೌಡ ಮತ್ತು ಸಬ್ ಇನ್ಸ್‌ಪೆಕ್ಟರ್ ರಾಜ್ ಶೇಖರ್ ವಂದಲಿ ಅವರು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿದ್ದು, ನಿಯಮ ಉಲ್ಲಂಘಿಸಿದ 25 ರಿಂದ 35 ವಾಹನಗಳನ್ನು ಸೀಝ್ ಮಾಡಿದ್ದಾರೆ.ಹಾಗೂ 7 ರಿಂದ 9 ವಾಹನಗಳ ಮೇಲೆ ಕೇಸು ದಾಖಲಿಸಿ 20 ಸಾವಿರ ರೂಪಾಯಿ ದಂಡ ಹಾಕಿದ್ದಾರೆ. ಬಳಿಕ ಜಿಲ್ಲಾಧಿಕಾರಿಗಳು ಶಿರ್ವ ಲಸಿಕಾ ಕೇಂದ್ರಗಳಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇನ್ನು ಜೂನ್ 7 ವರೆಗೆ ಲಾಕ್’ಡೌನ್ ಮುಂದುವರಿದಿದ್ದು ಜಿಲ್ಲೆಯಲ್ಲಿ ಹತ್ತು ಗಂಟೆಯ ನಂತರ ಬೇಕಾಬಿಟ್ಟಿ ಓಡಾಡಿದರೆ ಪ್ರಕರಣ ದಾಖಲಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next