Advertisement

ಮಾಸ್ಕ್ ಧರಿಸದಿದ್ದರೆ, ಸಾಮಾಜಿಕ ಅಂತರ ಪಾಲಿಸದಿದ್ದರೆ ದಂಡ: ಉಡುಪಿ ಜಿಲ್ಲಾಧಿಕಾರಿ ಆದೇಶ

08:11 AM May 11, 2020 | Hari Prasad |

ಉಡುಪಿ: ಕೋವಿಡ್ ನಿಯಂತ್ರಣದಲ್ಲಿ ಪರಿಣಾಮಕಾರಿ ವಿಧಾನಗಳನ್ನು ಅನುಸರಿಸುವ ಮೂಲಕ ಜಿಲ್ಲೆಯು ಹಸಿರು ವಲಯದಲ್ಲಿ ಗುರುತಿಸಿಕೊಂಡಿದೆ.

Advertisement

ಮೂರನೇ ಲಾಕ್ ಡೌನ್ ಅವಧಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಹಲವು ರೀತಿಯ ವಾಣಿಜ್ಯ ಕಾರ್ಯಚಟುವಟಿಕೆಗಳಿಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದೆ.

ಮತ್ತು ಬೆಳಿಗ್ಗೆ 7ರಿಂದ ಸಾಯಂಕಾಲ 7 ಗಂಟೆಗಳವರೆಗೆ ಸಾರ್ವಜನಿಕರ ಓಡಾಟಕ್ಕೂ ಜಿಲ್ಲೆಯಲ್ಲಿ ಅನುಮತಿಯನ್ನು ನೀಡಲಾಗಿದೆ.

ಆದರೆ ಈ ಸಂದರ್ಭದಲ್ಲಿ ಸೂಕ್ತ ಸುರಕ್ಷತಾ ವಿಧಾನಗಳನ್ನು ಎಲ್ಲರೂ ತಪ್ಪದೇ ಪಾಲಿಸುವಂತೆ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಇಂದು ಆದೇಶ ಹೊರಡಿಸಿದ್ದಾರೆ.

ಅದರಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೇ ಓಡಾಡುವುದು ಹಾಗೂ ಸಾಮಾಜಿಕ ಅಂತರವನ್ನು ಪಾಲಿಸದೇ ಇರುವುದು ಕಂಡುಬಂದಲ್ಲಿ ಅಂತಹ ವ್ಯಕ್ತಿಗಳಿಗೆ ದಂಡ ವಿಧಿಸುವಂತೆ ಜಿಲ್ಲಾಧಿಕಾರಿಯವರು ತಮ್ಮ ಹೊಸ ಆದೇಶದಲ್ಲಿ ತಿಳಿಸಿದ್ದಾರೆ.

Advertisement

ಜಿಲ್ಲೆ ಸದ್ಯಕ್ಕೆ ಹಸುರು ವಲಯದಲ್ಲಿ ಇದ್ದರೂ, ಕೋವಿಡ್ ವೈರಸ್ ವಿಚಾರಕ್ಕೆ ಸಂಬಂಧಿಸಿದಂತೆ ಲಾಕ್ ಡೌನ್ ಆದೇಶ ಜಾರಿಯಲ್ಲಿದೆ. ಈ ಕಾರಣದಿಂದ ಸರಕಾರದ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಎಲ್ಲರ ಕರ್ತವ್ಯವಾಗಿದೆ. ಹಾಗಾಗಿ, ಅವಶ್ಯಕ ಸಾಮಾಗ್ರಿಗಳನ್ನು ಖರೀದಿಸಲು ಅಂಗಡಿಗೆ ತೆರಳುವವರು, ಕಛೇರಿ ಕೆಲಸಕ್ಕೆ ಸೇರಿದಂತೆ ಇನ್ನಿತರ ಕಾರಣಕ್ಕೆ ಸಂಚರಿಸುವವರು ಮುಂಜಾಗರೂಕತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಹಾಗಾಗಿ ಮಾಸ್ಕ್ ಗಳನ್ನು ಧರಿಸಿಕೊಂಡು ಓಡಾಡುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಅಗತ್ಯವಾಗಿರುತ್ತದೆ. ಇದಕ್ಕೆ ತಪ್ಪಿದಲ್ಲಿ ಅಂತಹ ವ್ಯಕ್ತಿಗಳಿಗೆ ದಂಡ ವಿಧಿಸುವ ಅವಕಾಶವನ್ನೂ ಜಿಲ್ಲಾಧಿಕಾರಿಯವರು ಪೊಲೀಸ್ ಇಲಾಖೆಗೆ ನೀಡಿದ್ದಾರೆ.

ಮಾಸ್ಕ್ ಧರಿಸದಿರುವುದು, ಸಾಮಾಜಿಕ ಅಂತರವನ್ನು ಪಾಲಿಸದಿರುವುದೂ ಸೇರಿದಂತೆ ಕೋವಿಡ್ ವೈರಸ್ ನಿರೋಧಕ ಕ್ರಮಗಳನ್ನು ಅನುಸರಿಸದಿರುವ ವ್ಯಕ್ತಿಗಳಿಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರೂ.200 ಹಾಗೂ ಜಿಲ್ಲೆಯ ಇತರೆ ಕಡೆಗಳಲ್ಲಿ ರೂ. 100 ದಂಡ ವಿಧಿಸುವಂತೆ ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next