Advertisement

ಉಡುಪಿ ಜಿಲ್ಲೆಯಲ್ಲಿ ಮಾ.29ರಿಂದ ಬೆಳಿಗ್ಗೆ 7ರಿಂದ 11ರವರೆಗೆ ಮಾತ್ರ ಅಂಗಡಿಗಳು ಓಪನ್

09:26 AM Mar 29, 2020 | Hari Prasad |

ಉಡುಪಿ: ಕೋವಿಡ್ 19 ವೈರಸ್ ಸಮುದಾಯಕ್ಕೆ ಹರಡುವುದನ್ನು ತಪ್ಪಿಸುವ ಸಲುವಾಗಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಉಡುಪಿ ಜಿಲ್ಲಾಡಳಿತ ಜಾರಿಗಳಿಸಿದೆ. ಈ ಪ್ರಕಾರವಾಗಿ ಮಾರ್ಚ್ 29ರ ರವಿವಾರದಿಂದ ಜಿಲ್ಲೆಯಾದ್ಯಂತ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ಮಾತ್ರವೇ ದಿನಬಳಕೆಯ ದಿನಸಿ ಸಾಮಾಗ್ರಗಳ ಅಂಗಡಿಗಳು ಕಾರ್ಯಾಚರಿಸಲು ಅನುಮತಿ ನೀಡಲಾಗಿದೆ.

Advertisement

ಜಿಲ್ಲಾಡಳಿತ ನಿಗದಿಪಡಿಸಿರುವ ಈ ಅವಧಿಯಲ್ಲಿ ಮಾತ್ರವೇ ಗ್ರಾಹಕರು ತಮಗೆ ಅಗತ್ಯವಿರುವ ದಿನಸಿ ಸಾಮಾಗ್ರಗಳು, ತರಕಾರಿ ಹಣ್ಣು, ಹಾಲು, ಮಾಂಸ, ಮೀನು ಮುಂತಾದ ಅವಶ್ಯಕ ವಸ್ತುಗಳನ್ನು ಖರೀದಿಸಲು ಅನುಮತಿ ನೀಡಲಾಗಿದೆ. ಮತ್ತು ಖರೀದಿ ಸಂದರ್ಭದಲ್ಲಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆಯೂ ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next