Advertisement

ಉಡುಪಿ: ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ, ವಿದ್ಯಾರ್ಥಿಗಳಿಗೆ ಶುಭ ಹಾರೈಕೆ

10:50 AM Mar 28, 2022 | Team Udayavani |

ಉಡುಪಿ: ಉಡುಪಿ ಬೋರ್ಡ್ ಹೈಸ್ಕೂಲ್ ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಭೇಟಿ ನೀಡಿ, ಪರೀಕ್ಷೆಗೆ ಮಾಡಿಕೊಂಡಿರುವ ಸಿದ್ಧತೆ ಪರಿಶೀಲಿಸಿ, ಪರೀಕ್ಷೆ ಬರೆಯಲು ಕುಳಿತಿದ್ದ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

Advertisement

ನಂತರ ಮಾತನಾಡಿದ ಅವರು, ಶಿಕ್ಷಣ ಎಲ್ಲರಿಗೂ ಅತಿ ಮುಖ್ಯವಾಗಿದೆ. ಯಾರೂ ಕೂಡ ಪರೀಕ್ಷೆಯಿಂದ ದೂರ ಉಳಿಯಬಾರದು. ಮುಸ್ಲಿಂ ಮುಖಂಡರು ತಮ್ಮ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಬಂದು ಬಿಟ್ಟು ಹೋಗುತ್ತಿರುವುದು ಅಭಿನಂದನೀಯ ವಿಷಯವಾಗಿದೆ ಎಂದರು.

ಇದನ್ನೂ ಓದಿ:ಎಳೆ ಮನಸ್ಸಿನ ಮಕ್ಕಳ ಮೇಲೆ ಭಾವನೆಗಳನ್ನು ಹೇರುವುದು ಬೇಡ: ಕುಮಾರಸ್ವಾಮಿ

ಸಮವಸ್ತ್ರಕ್ಕೆ ಸಂಬಂಧಿಸಿದಂತೆ ಸರಕಾರದ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಜಿಲ್ಲೆಯ 58 ಪರೀಕ್ಷಾ ಕೇಂದ್ರದಲ್ಲೂ ಯಾವುದೇ ಗೊಂದಲ ಇಲ್ಲದೇ ಪರೀಕ್ಷೆ ಆರಂಭಗೊಂಡಿದೆ ಎಂದು ಹೇಳಿದರು.

Advertisement

ಬಳಿಕ ಜಿಲ್ಲಾಧಿಕಾರಿಯವರು ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಗೆ ಭೇಟಿ ನೀಡಿ, ಸಿದ್ದತೆ ಪರಿಶೀಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next