Advertisement

ಫೆ. 19: ಆರೂರಿನಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ

12:49 AM Feb 15, 2022 | Team Udayavani |

ಉಡುಪಿ: ಈ ಬಾರಿ ಉಡುಪಿ ಜಿಲ್ಲೆಯಲ್ಲಿ ನಡೆಯುವ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯದಲ್ಲಿ ಕಂದಾಯ ಸಚಿವ ಆರ್‌. ಅಶೋಕ್‌ ಭಾಗವಹಿಸುವ ಸಾಧ್ಯತೆ ಇದೆ.

Advertisement

ಫೆ. 19ರಂದು ಬ್ರಹ್ಮಾವರ ತಾಲೂಕಿನ ಆರೂರು ಗ್ರಾಮದಲ್ಲಿ ಸಚಿವರು ಜಿಲ್ಲಾಧಿಕಾರಿ ಗಳ ಜತೆ ವಾಸ್ತವ್ಯ ಹೂಡಲಿದ್ದಾರೆ. ಕೊಕ್ಕರ್ಣೆ ಮತ್ತು ಕಳೂ¤ರು ಗ್ರಾಮಕ್ಕೂ ಭೇಟಿ ನೀಡಿ, ಗ್ರಾಮಸ್ಥರ ಅಹವಾಲು ಸ್ವೀಕರಿಸಲಿದ್ದಾರೆ.

ಕಂದಾಯ ಸಚಿವರೇ ಬರುತ್ತಿರುವುದರಿಂದ ಜಿಲ್ಲಾಧಿಕಾರಿಗಳು ಸಹಿತವಾಗಿ ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಕೂಡ ಗ್ರಾಮ ವಾಸ್ತವ್ಯದಲ್ಲಿ ಭಾಗವಹಿಸುವ ಸಾಧ್ಯತೆಯಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಗ್ರಾಮ ವಾಸ್ತವ್ಯ ಅಚ್ಚುಕಟ್ಟಾಗಿ ನೆರವೇರಿಸುವ ನಿಟ್ಟಿನಲ್ಲಿ ಶಾಸಕರಾದ ರಘುಪತಿ ಭಟ್‌ ಅವರು ಈಗಾಗಲೇ ಇಲಾಖೆಯ ಅಧಿಕಾರಿಗಳ ಮಟ್ಟದಲ್ಲಿ ಪೂರ್ವಭಾವಿ ಸಭೆಯನ್ನು ನಡೆಸಿ, ಸಿದ್ಧತೆ ಆರಂಭಿಸಿದ್ದಾರೆ. ಕೊರೊನಾದಿಂದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಸರಿಯಾಗಿ ಜಾರಿಯಾಗಿರಲಿಲ್ಲ. ಈಗ ಕೊರೊನಾ ಮೂರನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಪುನಃ ಆರಂಭವಾಗಿದೆ.

ಇದನ್ನೂ ಓದಿ:ಗೋವಾ ಚುನಾವಣೆ : ಶೇ 78.94% ಮತದಾನ, ಮಾರ್ಚ್ 10 ಕ್ಕೆ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

Advertisement

ಪೂರ್ವಭಾವಿ ಸಭೆ
ಬ್ರಹ್ಮಾವರ: ಸಚಿವ ಆರ್‌. ಅಶೋಕ್‌ ಫೆ. 19ರಂದು ಆರೂರು ಗ್ರಾಮದಲ್ಲಿ ವಾಸ್ತವ್ಯ ಮಾಡಿ ಅಹವಾಲು ಸ್ವೀಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಸಕ ರಘುಪತಿ ಭಟ್‌ ಅಧಿ ಕಾರಿಗಳು ಮತ್ತು ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರೊಂದಿಗೆ ಸೋಮವಾರ ಕೊಕ್ಕರ್ಣೆ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಸಭಾಭವನದಲ್ಲಿ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು. ಜಿಲ್ಲಾ ಧಿಕಾರಿ ಕೂರ್ಮಾ ರಾವ್‌ ಎಂ., ಜಿ.ಪಂ. ಸಿಇಒ ನವೀನ್‌ ಭಟ್‌ ವೈ., ಎ.ಸಿ. ರಾಜು ಕೆ., ಬ್ರಹ್ಮಾವರದ ತಹಶೀಲ್ದಾರ್‌ ರಾಜಶೇಖರ್‌ ಮೂರ್ತಿ, ಪೊಲೀಸ್‌ ಉಪ ನಿರೀಕ್ಷಕ ಗುರುನಾಥ್‌ ಹಾದಿಮನೆ, ಪಕ್ಷದ ಪ್ರಮುಖರು, ವಿವಿಧ ಇಲಾಖೆಗಳ ಅಧಿ ಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next