Advertisement

Udupi ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ

08:25 PM May 15, 2024 | Team Udayavani |

ಉಡುಪಿ: ಮಾನಸಿಕವಾಗಿ ನೊಂದ ಮಹಿಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊರಂಗ್ರಪಾಡಿಯ ಸಾಯಿಬಾಬಾ ಮಂದಿರದ ಬಳಿ ಮಂಗಳವಾರ ನಡೆದಿದೆ.

Advertisement

ನೇಕಾರಿಕೆ ವೃತ್ತಿ ಮಾಡಿಕೊಂಡಿದ್ದ ಭಾರತಿ ಶೆಟ್ಟಿಗಾರ್‌ (53) ಮೃತಪಟ್ಟವರು.

ಮಹಿಳೆ ಆತ್ಮಹತ್ಯೆಗೂ ಮುನ್ನ ಪಕ್ಕದ ಮನೆಯವರೆಗೆ ಕರೆ ಮಾಡಿ ತಿಳಿಸಿದ್ದರು. ನೆರೆಮನೆಯವರು ಬಂದು ನೋಡಿದಾಗ ಮಹಿಳೆ ಅದಾಗಲೇ ಮೃತಪಟ್ಟಿದ್ದರು.

ಮಹಿಳೆ ಬರೆದಿರುವ ಡೆತ್‌ ನೋಟ್‌ ಸ್ಥಳದಲ್ಲಿ ಪತ್ತೆಯಾಗಿದೆ.

ಎಎಸ್‌ಐ ವಿಜಯ, ತನಿಖಾ ಸಹಾಯಕರಾಗಿರುವ ನೇತ್ರಾ, ಶಿವಕುಮಾರ್‌ ಅವರು ಕಾನೂನು ಪ್ರಕ್ರಿಯೆ ನಡೆಸಿದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಶವವನ್ನು ಅಜ್ಜರಕಾಡು ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next