Advertisement

ಉಡುಪಿ ಜಿಲ್ಲೆ 5 ಕಡೆ ಕಂಟೈನ್‌ಮೆಂಟ್‌ ವಲಯ

01:49 AM Jan 03, 2022 | Team Udayavani |

ಉಡುಪಿ: ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಉಡುಪಿಯ ಎಂಐಟಿ ಕ್ಯಾಂಪಸ್‌ನ 7 ಹಾಗೂ 10ನೇ ಬ್ಲಾಕ್‌, ನ್ಯೂ ಇಂಟರ್‌ನ್ಯಾಶನಲ್‌ ಹಾಸ್ಟೆಲ್‌, ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಪರ್ಕಿಸುವ ಬಳಿ ಇರುವ 2 ಅಪಾರ್ಟ್‌ಮೆಂಟ್‌ಗಳನ್ನು ಕಂಟೈನ್‌ಮೆಂಟ್‌ ವಲಯ ಮಾಡಲಾಗಿದೆ.

Advertisement

ಸಚಿವ ಸುನಿಲ್‌ ಸೂಚನೆ
ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ಕೋವಿಡ್‌ ಸೋಂಕಿತರ ಸಂಖ್ಯೆ ಅಲ್ಪ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಸೋಂಕು ಇರುವ ಸ್ಥಳಗಳಲ್ಲಿ ಹೆಚ್ಚು ಹೆಚ್ಚು ಪರೀಕ್ಷೆಯನ್ನು ಮಾಡುವುದರ ಜತೆ ಅವರನ್ನು ಗುರುತಿಸಿ ಚಿಕಿತ್ಸೆ ನೀಡಬೇಕು. ಮಾತ್ರವಲ್ಲದೇ ಕಂಟೈನ್‌ಮೆಂಟ್‌ ವಲಯಗಳನ್ನಾಗಿ ಘೋಷಿಸಿ ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವ ಸುನಿಲ್‌ ಕುಮಾರ್‌ ಸೂಚನೆ ನೀಡಿದರು.

ಇದನ್ನೂ ಓದಿ:ನವೆಂಬರ್‌ನಲ್ಲಿ 17.5 ಲಕ್ಷ ವಾಟ್ಸ್‌ಆ್ಯಪ್‌ ಖಾತೆ ಬ್ಯಾನ್‌

ದ.ಕ. : 63 ಮಂದಿಗೆ ಕೊರೊನಾ; 1 ಸಾವು
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರ 63 ಮಂದಿಗೆ ಸೋಂಕು ದೃಢಪಟ್ಟಿದೆ. ಒಬ್ಬರು ಮೃತಪಟ್ಟಿದ್ದಾರೆ. 18 ಮಂದಿ ಗುಣಮುಖ ಹೊಂದಿದ್ದಾರೆ. ಪ್ರಸ್ತುತ 231 ಮಂದಿ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಾಸಿಟಿವಿಟಿ ದರ ಶೇ. 0.78 ರಷ್ಟಿದೆ.

ಉಡುಪಿ: 54 ಪ್ರಕರಣ
ಉಡುಪಿ: ಜಿಲ್ಲೆಯಲ್ಲಿ ರವಿವಾರ 54 ಪ್ರಕರಣ ದೃಢಪಟ್ಟಿದೆ. 5,777 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದ್ದು, 8 ಮಂದಿ ಬಿಡುಗಡೆಯಾಗಿದ್ದಾರೆ. 186 ಪ್ರಕರಣಗಳು ಸಕ್ರಿಯವಾಗಿವೆ.

Advertisement

ಕಾಸರಗೋಡು: 42 ಮಂದಿಗೆ ಸೋಂಕು
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ 42 ಪ್ರಕರಣ ದೃಢಪಟ್ಟಿದೆ. 104 ಮಂದಿ ಗುಣಮುಖರಾಗಿದ್ದಾರೆ. 321 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊಡಗು: 10 ಮಂದಿಗೆ ಸೋಂಕು
ಮಡಿಕೇರಿ: ಜಿಲ್ಲೆಯಲ್ಲಿ ರವಿವಾರ 10 ಪ್ರಕರಣ ದೃಢಪಟ್ಟಿದ್ದು 85 ಮಂದಿ ಗುಣಮುಖರಾಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next