Advertisement

Udupi; ಲಾಭಾಂಶ ಆಮಿಷ: 43 ಲಕ್ಷ ರೂ. ವಂಚನೆ

11:25 PM Jan 23, 2024 | Team Udayavani |

ಉಡುಪಿ: ಆ್ಯಪ್‌ ಒಂದರಲ್ಲಿ ಹೂಡಿಕೆ ಮಾಡಿ ಹೆಚ್ಚಿನ ಲಾಭಾಂಶ ಪಡೆಯುವ ಬಗ್ಗೆ ಟೆಲಿಗ್ರಾಮ್‌ ಆ್ಯಪ್‌ ಮೂಲಕ ಬಂದಿದ್ದ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು 43.43 ಲಕ್ಷ ರೂ. ಕಳೆದುಕೊಂಡಿದ್ದಾರೆ.

Advertisement

ಪರ್ಕಳದ ಯತಿರಾಜ್‌ ವಂಚನೆಗೊಳಗಾದವರು. ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಮಿಷ ಒಡ್ಡಿದ ಆರೋಪಿಗಳು ವಿವಿಧ ಬ್ಯಾಂಕ್‌ ಖಾತೆಗಳಿಗೆ ಹಣ ವರ್ಗಾಯಿಸುವಂತೆ ತಿಳಿಸಿದರು. ಅದರಂತೆ ಹಂತಹಂತವಾಗಿ ಒಟ್ಟು 43.43 ಲಕ್ಷ ರೂ. ಹಣ ಪಾವತಿಸಿದ್ದಾರೆ. ಹೂಡಿಕೆ ಮಾಡಿದ ಹಣ ಸಹಿತ ಲಾಭಾಂಶವನ್ನೂ ನೀಡದೆ ವಂಚನೆ ಮಾಡಲಾಗಿದೆ ಎಂದು ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಕಳವು ಆರೋಪಿಗಳ ಬಂಧನ
ಉಡುಪಿ: ಮಣಿಪಾಲದ ಸಗ್ರಿಯಲ್ಲಿ ನಡೆದ ಬ್ಯಾಟರಿ ಕಳ್ಳತನದ ಆರೋಪಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ವೃತ್ತ ನಿರೀಕ್ಷಕ ದೇವರಾಜ್‌ ಟಿ.ವಿ., ಠಾಣಾಧಿಕಾರಿಗಳಾದ ರಾಘವೇಂದ್ರ, ಅಕ್ಷಯ ಕುಮಾರಿ, ಸಿಬಂದಿ ಪ್ರಸನ್ನ, ವಿವೇಕ್‌, ಇಮ್ರಾನ್‌, ಚೆನ್ನೇಶ್‌ ಹಾಗೂ ಇತರ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next