Advertisement

Udupi;ಬಸ್ ಗೆ ಹಿಂಬದಿಯಿಂದ ಎಕ್ಸ್‌ಪ್ರೆಸ್‌ ಬಸ್ ಢಿಕ್ಕಿ: ಚಾಲಕನಿಗೆ ಗಾಯ

10:51 AM Jul 31, 2024 | Team Udayavani |

ಉಡುಪಿ: ಬಸ್ ಢಿಕ್ಕಿ ಹೊಡೆದು ಚಾಲಕ ಗಾಯಗೊಂಡ ಘಟನೆ ಇಂದ್ರಾಳಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.ಉಡುಪಿಯಿಂದ ಮಣಿಪಾಲಕ್ಕೆ ತೆರಳುತ್ತಿದ್ದ ಸಿಟಿ ಬಸ್ ಗೆ ಹಿಂಬದಿಯಲ್ಲಿ ಅತೀ ವೇಗದಿಂದ ಬಂದ ಎಕ್ಸ್‌ಪ್ರೆಸ್‌ ಬಸ್ ಢಿಕ್ಕಿ ಹೊಡೆದ ಪರಿಣಾಮ ಆ ಬಸ್ ನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Advertisement

ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಒಂದು ಬಸ್ ನ ಹಿಂಭಾಗ ಹಾಗೂ ಮತ್ತೊಂದು ಬಸ್ ನ ಮುಂಭಾಗ ಜಖಂಗೊಂಡಿದೆ. ಮಣಿಪಾಲ ಠಾಣೆಯ ಪೊಲೀಸರು ಆಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Advertisement

Udayavani is now on Telegram. Click here to join our channel and stay updated with the latest news.

Next